ಆದರ್ಶ ನಗರದಲ್ಲಿ ತಡೆಗೋಡೆ ಕುಸಿತ-ಶಾಸಕರಿಂದ ಪರಿಶೀಲನೆ

0

ಉಪ್ಪಿನಂಗಡಿ: ಮೇ 20ರಂದು ಸುರಿದ ಭಾರೀ ಮಳೆಗೆ 34 ನೆಕ್ಕಿಲಾಡಿ- ಬೊಳುವಾರು ರಾಜ್ಯ ಹೆದ್ದಾರಿಯ ಆದರ್ಶನಗರ ಎಂಬಲ್ಲಿ ಹೆದ್ದಾರಿ ಬಳಿಯ ತಡೆಗೋಡೆ ಕುಸಿದಿದ್ದು, ಮೇ 21ರಂದು ಶಾಸಕ ಅಶೋಕ್ ಕುಮಾರ್ ರೈಯವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಹೆದ್ದಾರಿ ವಿಸ್ತರಣೆ ಸಂದರ್ಭ ನಿರ್ಮಾಣವಾದ ಈ ಕಾಮಗಾರಿ ಪ್ರಥಮ ಮಳೆಗೆ ಕುಸಿತಗೊಂಡಿದ್ದರಿಂದ ಸ್ಥಳಕ್ಕೆ ಎಂಜಿನಿಯರ್‌ಗಳನ್ನು ಕರೆಸಿಕೊಂಡ ಶಾಸಕರು, ಅವರನ್ನು ತರಾಟೆಗೆ ತೆಗೆದುಕೊಂಡರಲ್ಲದೆ, ಗುಣಮಟ್ಟದ ತಡೆಗೋಡೆ ನಿರ್ಮಾಣ ಮಾಡುವಂತೆ ಸೂಚಿಸಿದರು.


ಈ ಸಂದರ್ಭ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮುಹಮ್ಮದ್, ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಯುನಿಕ್, ೩೪ ನೆಕ್ಕಿಲಾಡಿ ಕಾಂಗ್ರೆಸ್ ವಲಯಾಧ್ಯಕ್ಷೆ ಅನಿ ಮಿನೇಜಸ್, ಬೂತ್ ಅಧ್ಯಕ್ಷ ಅಬ್ದುಲ್ ಖಾದರ್, ಕಾಂಗ್ರೆಸ್ ಮುಖಂಡ ರಮಾನಾಥ ವಿಟ್ಲ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here