ಮೇ.22: ಅರಿವು ಕೃಷಿ ಕೇಂದ್ರದಲ್ಲಿ ಉದ್ಯಮಾಸಕ್ತರಿಗೆ ಉದ್ಯಮಶೀಲತೆ, ಅಭಿವೃದ್ಧಿ ಕುರಿತು ಮಾಹಿತಿ ಕಾರ್ಯಾಗಾರ

0

ಪುತ್ತೂರು: ಉದ್ಯೋಗಾಂಕ್ಷಿಗಳಿಗೆ ಮತ್ತು ಸ್ವಂತ ಉದ್ಯಮ ಮಾಡುವವರಿಗಾಗಿ ಉದ್ಯಮಶೀಲತೆ, ಅಭಿವೃದ್ಧಿ ಕುರಿತು ವಿಶೇಷ ಮಾಹಿತಿ ಕಾರ್ಯಾಗಾರ ಎಪಿಎಂಸಿ ರಸ್ತೆ ಕ್ರಿಸ್ತೋಫರ್ ಕಾಂಪ್ಲೆಕ್ಸ್‌ನಲ್ಲಿರುವ ಅರಿವು ಕೃಷಿ ಕೇಂದ್ರದಲ್ಲಿ ಮೇ.22ರಂದು ನಡೆಯಲಿದೆ.

ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಅಭಿವೃದ್ಧಿ ಯೋಜನೆ ದ.ಕ.ಜಿಲ್ಲೆಯ ಸಂಪನ್ಮೂಲ ವ್ಯಕ್ತಿ ಸತೀಶ್ ಮಾಬೆನ್ ಮಾಹಿತಿ ನೀಡಲಿದ್ದಾರೆ. ಬೆಳಿಗ್ಗೆ 9.30ರಿಂದ ನೋಂದಾವಣೆ, ಬಳಿಕ ಕಾರ್ಯಾಗಾರ ನಡೆಯಲಿದೆ. ಅಪರಾಹ್ನ 2ರಿಂದ 4ರವರೆಗೆ ದಾಖಲಾತಿ ಜೋಡಣೆ ಮತ್ತು ಉದ್ಯಮ ಪ್ರಾರಂಭಿಸಲು ಬೇಕಾದ ಅಂತಿಮ ಯೋಜನೆ ತಯಾರಿ ಬಗ್ಗೆ ಪ್ರಾತ್ಯಕ್ಷಿಕತೆ ನಡೆಯಲಿದೆ ಹೆಚ್ಚಿನ ಮಾಹಿತಿಗಾಗಿ 8050293990 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here