ಬಿಳಿನೆಲೆ: ಚರಂಡಿಗೆ ಬಿದ್ದ ಇಕೋ ಕಾರು-ಪ್ರಯಾಣಿಕ ಮಂಡ್ಯ ಮೂಲದ ವಿರುಪಾಕ್ಷ ಮೃತ್ಯು

0

ಕಡಬ: ಮಾರುತಿ ಇಕೋ ಕಾರು ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ಕರೆದೊಯ್ಯುವ ದಾರಿಮಧ್ಯೆ ಮೃತಪಟ್ಟ ಘಟನೆ ಮೇ 20ರಂದು ಮಧ್ಯಾಹ್ನ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಕಿದು ಎಂಬಲ್ಲಿ ನಡೆದಿದೆ.


ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ವಿರುಪಾಕ್ಷ(40ವ.)ಮೃತಪಟ್ಟವರಾಗಿದ್ದಾರೆ. ಈ ಬಗ್ಗೆ ಕೆ.ಆರ್.ಪೇಟೆ ತಾಲೂಕು ಮುರುಕ್ಕನಹಳ್ಳಿ ನಿವಾಸಿ ಯೋಗೇಶ್ ಎಂಬವರು ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಕೇಸು ದಾಖಲಾಗಿದೆ. ಯೋಗೇಶ್ ಹಾಗೂ ಅವರ ಸ್ನೇಹಿತರಾದ ಸಂತೋಷ್, ಸ್ವಾಮಿ, ಶಿವಕುಮಾರ್, ನಾಗೇಶ್, ವಿರುಪಾಕ್ಷ, ದ್ವಾರಕೇಶ್‌ರವರು ಮಾರುತಿ ಇಕೋ ಕಾರು(ಕೆಎ 01, ಎನ್‌ಎ 4003)ನಲ್ಲಿ ಮೇ 19ರಂದು ರಾತ್ರಿ ಧರ್ಮಸ್ಥಳಕ್ಕೆ ಬಂದಿದ್ದರು. ಮೇ.20ರಂದು ಮಧ್ಯಾಹ್ನ ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗುತ್ತಿದ್ದು ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಕಿದು ಎಂಬಲ್ಲಿ ತಲುಪಿದಾಗ ಕಾರು ರಸ್ತೆ ಬದಿಯ ಚರಂಡಿಗೆ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ವಿರುಪಾಕ್ಷರವರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಉಪಚರಿಸಿ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದಾಗ ವೈದ್ಯರು ಪರೀಕ್ಷಿಸಿ ವಿರುಪಾಕ್ಷ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಕಾರಿನಲ್ಲಿದ್ದ ಉಳಿದ ಪ್ರಯಾಣಿಕರು ಅಲ್ಪಸ್ವಲ್ಪ ಗಾಯಗೊಂಡಿದ್ದಾರೆ. ಕಾರು ಚಾಲಕ ಸಂತೋಷ್‌ರವರು ಅಜಾಗರೂಕತೆಯಿಂದ ಕಾರು ಚಲಾಯಿಸಿದ ಪರಿಣಾಮ ಈ ಅಪಘಾತ ನಡೆದಿರುತ್ತದೆ ಎಂದು ಯೋಗೇಶ್ ಅವರು ನೀಡಿದ ದೂರಿನಂತೆ ಕಡಬ ಪೊಲೀಸು ಠಾಣೆಯಲ್ಲಿ ಕೇಸು ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

LEAVE A REPLY

Please enter your comment!
Please enter your name here