ಕೊಯಿಲ ಗ್ರಾ.ಪಂ.ವ್ಯಾಪ್ತಿಯ ಅಪಾಯಕಾರಿ ಮರಗಳ ತೆರವು

0

ರಾಮಕುಂಜ: ಕೊಯಿಲ ಗ್ರಾ.ಪಂ ವ್ಯಾಪ್ತಿಯಲ್ಲಿನ ಅಪಾಯಕಾರಿ ಮರಗಳನ್ನು ಅರಣ್ಯ ಇಲಾಖೆ ನೇತೃತ್ವದಲ್ಲಿ ತೆರವುಗೊಳಿಸಲಾಗಿದೆ.
ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಆತೂರು ಹಾಗೂ ಗಂಡಿಬಾಗಿಲು ರಸ್ತೆ ಬದಿಯಲ್ಲಿದ್ದ ಅಪಾಯಕಾರಿ ಮರಗಳನ್ನು ಪುತ್ತೂರು ವಲಯ ಅರಣ್ಯ ಇಲಾಖೆಯವರ ನೇತೃತ್ವದಲ್ಲಿ ತೆರವುಗೊಳಿಸಲಾಗಿದೆ. ಗ್ರಾ.ಪಂ.ವ್ಯಾಪ್ತಿಯಲ್ಲಿನ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆ ಕೊಯಿಲ ಗ್ರಾ.ಪಂ. ವತಿಯಿಂದ ಅರಣ್ಯ ಇಲಾಖೆಗೆ ಮನವಿ ಮಾಡಲಾಗಿತ್ತು. ಆತೂರಿನಲ್ಲಿ ರಾಜ್ಯ ಹೆದ್ದಾರಿ ಬದಿಯಲ್ಲಿ ಅಪಾಯಕಾರಿ ಮರ ಇರುವ ಬಗ್ಗೆ ಸುದ್ದಿಬಿಡುಗಡೆ ಪತ್ರಿಕೆಯಲ್ಲಿ ವರದಿಯೂ ಪ್ರಕಟಗೊಂಡಿತ್ತು. ಇದೀಗ ಅರಣ್ಯ ಇಲಾಖೆ ಗ್ರಾ.ಪಂ.ವ್ಯಾಪ್ತಿಯಲ್ಲಿನ ಅಪಾಯಕಾರಿ ಮರಗಳನ್ನು ತೆರವುಗೊಳಿಸಿದೆ.

LEAVE A REPLY

Please enter your comment!
Please enter your name here