ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರಿಗೆ 1 ಲಕ್ಷ ಮತಗಳ ಅಂತರದ ಗೆಲುವು- ಉಮೇಶ್ ಗೌಡ ಅಂಬಟ

0

ದ.ಕ ಜಿಲ್ಲಾ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಅವರು ಸುಮಾರು 1 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ 25 ಸಾವಿರ ಮತಗಳ ಮುನ್ನಡೆ ಪಡೆಯಲಿದೆ. ಪ್ರಧಾನಿ ಮೋದಿ ಅವರು ಮತ್ತೊಮ್ಮೆ ದೇಶದ ಪ್ರಧಾನಿ ಆಗಬೇಕೆನ್ನುವುದು ಜನತೆಯ ಆಶಯವಾಗಿದ್ದು ಹೀಗಾಗಿ ಹೆಚ್ಚಿನ ಜನತೆ ಬಿಜೆಪಿ ಪರವಾಗಿ ಮತ ಚಲಾಯಿಸಿರುವುದರಲ್ಲಿ ಸಂಶಯವಿಲ್ಲ. ಕೇಂದ್ರದಲ್ಲಿ ಮೋದಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು ಅದನ್ನು ಮುಂದುವರಿಸಿಕೊಂಡು ಹೋಗಬೇಕಾದರೆ ಮೋದಿ ಮತ್ತೊಮ್ಮೆ ಪ್ರಧಾನಿ ಆಗುವುದು ಅನಿವಾರ್ಯ, ಈ ನಿಟ್ಟಿನಲ್ಲಿ ದ.ಕ ಜಿಲ್ಲಾ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಜನತೆ ಆಶೀರ್ವದಿಸಲಿದ್ದಾರೆ.
-ಉಮೇಶ್ ಗೌಡ ಅಂಬಟ, ಸದಸ್ಯರು ಮುಂಡೂರು ಗ್ರಾ.ಪಂ

LEAVE A REPLY

Please enter your comment!
Please enter your name here