ನಿವೃತ್ತ ಶಿಕ್ಷಕ ಮಹಾಲಿಂಗೇಶ್ವರ ದೇವಸ್ಥಾನ ಬಳಿಯ ನಿವಾಸಿ ಚಂದ್ರಶೇಖರ ಕುಂಜತ್ತಾಯ ನಿಧನ

0

ಪುತ್ತೂರು: ಸಂತ ಫಿಲೋಮಿನಾ ಶಾಲೆಯ ನಿವೃತ್ತ ಶಿಕ್ಷಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ನಿವಾಸಿ ಚಂದ್ರಶೇಖರ ಕುಂಜತ್ತಾಯ (77ವ) ರವರು ಮೇ 23 ರ ನಸುಕಿನ ಜಾವ ನಿಧನರಾದರು.

ಅಲ್ಪಕಾಲದ ಅಸೌಖ್ಯದಿಂದ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಗಣಿತ ಹಾಗೂ ವಿಜ್ಞಾನ ಶಿಕ್ಷಕರಾಗಿ ಪಂಜದಿಂದ ವೃತ್ತಿ ಜೀವನವನ್ನು ಆರಂಭಿಸಿ ನಂತರ ಫಿಲೋಮಿನಾ ಹೈಸ್ಕೂಲಿನಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ಅವರು ತನ್ನ ಸ್ವಗೃಹದಲ್ಲಿ ಹಲವಾರು ವಿದ್ಯಾರ್ಥಿಗಳಿಗೆ ಸಂಜೆ ಹೊತ್ತು ಉಚಿತವಾಗಿ ಮನೆ ಪಾಠವನ್ನು ಹೇಳಿಕೊಡುತ್ತಿದ್ದರು. ಶ್ರೀ ಶಾರದಾ ಭಜನಾ ಮಂದಿರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕುಂಜತ್ತಾಯ ಅವರು  ಪತ್ನಿ ಪುಷ್ಪಾಲತಾ ಮಕ್ಕಳಾದ ಗಿರೀಶ್, ಪೂರ್ಣಪ್ರಜ್ಞ, ಸಂಧ್ಯಾ, ವಿದ್ಯಾ, ಸವಿತಾ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here