ಮೇ.24: ಬೆಟ್ಟಂಪಾಡಿ ಶ್ರೀ ಕ್ಷೇತ್ರದಲ್ಲಿ ಪತ್ತನಾಜೆ ಜಾತ್ರೆ

0

ಬೆಟ್ಟಂಪಾಡಿ: ವರ್ಷದ ಆದಿ ಮತ್ತು ಅಂತ್ಯ ಜಾತ್ರೆ ನಡೆಯುವ ಕ್ಷೇತ್ರವಾಗಿರುವ ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಜಾತ್ರೆಯು ಮೇ.24ರಂದು ನಡೆಯಲಿದೆ.
ಬೆಳಿಗ್ಗೆ ನವಕ ಕಲಶಾಭಿಷೇಕ, ತುಲಾಭಾರ ಸೇವೆ ನಡೆದು ಮಹಾಪೂಜೆ, ಅನ್ನಸಂತರ್ಪಣೆ ಜರಗಲಿದೆ‌.
ಸಂಜೆ ಭಜನಾ ಕಾರ್ಯಕ್ರಮ, ಮಹಾಪೂಜೆಯಾಗಿ ಶ್ರೀದೇವರ ಉತ್ಸವ ಬಲಿ ನಡೆದು ಬಟ್ಟಲು ಕಾಣಿಕೆ‌, ರಾಜಾಂಗಣದಲ್ಲಿ ಮಹಾಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಳದ ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here