ಜೂ.8, 9: ಪದಾಳ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ

0

ಉಪ್ಪಿನಂಗಡಿ: ಇಲ್ಲಿನ ಪುಳಿತ್ತಡಿಯ ಪದಾಳ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜೂ.8 ಮತ್ತು 9ರಂದು ತಾಂಬೂಲ ಪ್ರಶ್ನಾ ಚಿಂತನೆ ನಡೆಯಲಿದೆ.

ಪದಾಳ ದೇವಸ್ಥಾನವು ಉಪ್ಪಿನಂಗಡಿಯ ಗ್ರಾಮ ದೇವಸ್ಥಾನವಾಗಿದ್ದು, ಇದರ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಈಗಾಗಲೇ ತೀರ್ಮಾನಿಸಲಾಗಿದೆ. ಆದ್ದರಿಂದ ಶ್ರೀ ಕ್ಷೇತ್ರದ ದೈವ ದೇವರ ಸಾನಿಧ್ಯ ವೃದ್ಧಿ, ಬ್ರಹ್ಮಕಲಶೋತ್ಸವದ ವಿಷಯವಾಗಿ ತಾಂಬೂಲ ಪ್ರಶ್ನಾ ಚಿಂತನೆಯು ದೈವಜ್ಞರಾದ ಕೃಷ್ಣಮೂರ್ತಿ ಪುದ್ಕೋಳಿ ಇವರ ನೇತೃತ್ವದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಆದ್ದರಿಂದ ಗ್ರಾಮಸ್ಥರು, ಭಕ್ತರು ಈ ಸಂಧರ್ಭ ಹಾಜರಿದ್ದು, ಸೂಕ್ತ ಸಲಹೆ-ಸೂಚನೆಗಳನ್ನು ನೀಡಬೇಕೆಂದು ಶ್ರೀ ದೇವಾಲಯದ ಆಡಳಿತ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here