ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದಲ್ಲಿ ಅಧ್ಯಕ್ಷರ ಚಿದಾನಂದ ಬೈಲಾಡಿ ದಂಪತಿಯ 27ನೇ ವರ್ಷದ ವೈವಾಹಿಕ ಸಂಭ್ರಮಾಚರಣೆ

0

ಪುತ್ತೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಮತ್ತು ಬೋಳಂತಿಮುಗೇರು ಪ್ರೌಢಶಾಲೆಯ ಮುಖ್ಯಗುರು ಸಂಧ್ಯಾರಾಣಿ ಅವರ ವೈವಾಹಿಕ ಜೀವನದ 27ನೇ ವರ್ಷದ ಸಂಭ್ರಮಾಚರಣೆಯನ್ನು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಪ್ರಧಾನ ಕಚೇರಿಯಲ್ಲಿ ನಡೆಸಲಾಯಿತು.


ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ, ಕಾರ್ಯದರ್ಶಿ ದಯಾನಂದ ಕೆ.ಎಸ್, ಯುವ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಅಮರನಾಥ ಗೌಡ ಬಪ್ಪಳಿಗೆ, ಸಂಘದ ಪದಾಧಿಕಾರಿಗಳಾದ ಲಿಂಗಪ್ಪ ಗೌಡ ತೆಂಕಿಲ, ಶ್ರೀಧರ ಕಣಜಾಲು, ನಿರ್ದೇಶಕರಾದ ರಾಮಕೃಷ್ಣ ಕರ್ಮಲ, ಜಿನ್ನಪ್ಪ ಮಳವೇಳು, ಸುದರ್ಶನ ಗೌಡ ಕೋಡಿಂಬಾಳ, ಸತೀಶ ಪಾಂಬಾರು, ಪ್ರವೀಣ್ ಕುಂಟ್ಯಾನ, ಲೋಕೇಶ್ ಚಾಕೋಟೆ, ಸುಪ್ರಿತಾರವಿಚಂದ್ರ, ತೇಜಸ್ವಿನಿ ಶೇಖರ ಗೌಡ ಶುಭ ಹಾರೈಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ್ ಕೆ ಕಾರ್ಯಕ್ರಮ ನಿರೂಪಿಸಿ, ಸಂಘದ ಸಿಬ್ಬಂದಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here