ಉರುವಾಲು: ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕ ಸಾವು

0

ಉಪ್ಪಿನಂಗಡಿ: ಹೊಟ್ಟೆನೋವು ಹಾಗೂ ವಾಂತಿ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಮುರತ್ತಕೋಡಿ ನಿವಾಸಿ ಅಕ್ಷಿತ್ ಕುಮಾರ್ ಜಿ.(25ವ.)ಅವರು ಚಿಕಿತ್ಸೆಗೆ ಸ್ಪಂದಿಸದೆ ಮೇ 26ರಂದು ಸಾವನ್ನಪ್ಪಿದ್ದಾರೆ.


ಅಕ್ಷಿತ್ ಕುಮಾರ್‌ಗೆ ಕಳೆದ ಒಂದೂವರೇ ವರ್ಷದಿಂದ ಯಾವಾಗಲಾದರೊಮ್ಮೆ ಹೊಟ್ಟೆನೋವು ಆಗುತಿತ್ತು. ಅವರು ಮೇ 21ರಂದು ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿಗೆ ಗಾರೆ ಕೆಲಸಕ್ಕೆ ಹೋಗಿದ್ದು ಅಲ್ಲಿ ಸಂಜೆ ಹೊಟ್ಟೆ ನೋವು ಮತ್ತು ವಾಂತಿ ಪ್ರಾರಂಭವಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಚಿಕಿತ್ಸೆಗಾಗಿ ಬೆಳ್ತಂಗಡಿಯ ಖಾಸಗಿ ಕ್ಲೀನಿಕ್‌ಗೆ ಕರೆದುಕೊಂಡು ಹೋಗಿದ್ದು ಅಲ್ಲಿನ ವೈದ್ಯರ ಸಲಹೆಯಂತೆ ರಾಘವೇಂದ್ರ ನರ್ಸಿಂಗ್ ಹೋಂಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮೇ.22ರಂದು ಮನೆಗೆ ಬಂದಿದ್ದನು. ಬಳಿಕ ಮೇ 23ರಂದು ಮತ್ತೆ ಹೊಟ್ಟೆನೋವು ಪ್ರಾರಂಭವಾಗಿ ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ ಗುಣಮುಖರಾಗದೇ ಇದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮೇ 25ರಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರ ಶಿಫಾರಸ್ಸಿನಂತೆ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿನ ವೈದ್ಯರು ಯಾವುದೋ ವಿಷದ ಅಂಶದಿಂದ ಈ ರೀತಿ ಉಂಟಾಗಿದ್ದೆಂದು ತಿಳಿಸಿ ಚಿಕಿತ್ಸೆ ಕೊಡುತ್ತಿದ್ದರು. ಚಿಕಿತ್ಸೆಯಲ್ಲಿದ್ದ ಅಕ್ಷಿತ್ ಚಿಕಿತ್ಸೆ ಫಲಕಾರಿಯಾಗದೇ ಮೇ 26ರಂದು 8 ಗಂಟೆ ವೇಳೆಗೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಅಕ್ಷಿತ್ ಕುಮಾರ್ ಅವರ ಸಹೋದರ ಪುನೀತ್ ಕುಮಾರ್ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here