ಪರಿಷತ್ ಚುನಾವಣೆ-ಶಿಕಾರಿಪುರ ನ್ಯಾಯಾಲಯ ಆವರಣದಲ್ಲಿ ಮೈತ್ರಿ ಅಭ್ಯರ್ಥಿಗಳ ಪರ ಮತಯಾಚನೆ

0

ಪುತ್ತೂರು: ಕರ್ನಾಟಕ ವಿಧಾನ ಪರಿಷತ್ ನ ನೈರುತ್ಯ ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ಚುನಾವಣೆಯ ಎನ್.ಡಿ.ಎ ಮೈತ್ರಿ ಅಭ್ಯರ್ಥಿಗಳಾದ ಡಾ.ಧನಂಜಯ ಸರ್ಜಿ ಹಾಗೂ ಎಸ್.ಎಲ್ ಬೋಜೇ ಗೌಡ ರವರ ಪರವಾಗಿ ಮೇ.29ರಂದು ಶಿಕಾರಿಪುರ ನ್ಯಾಯಾಲಯ ಸಂಘದ ಆವರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಮತ ಯಾಚಿಸಿದರು.
ಪರಿಷತ್ ಚುನಾವಣೆಯ ಎನ್.ಡಿ.ಎ ಮೈತ್ರಿಕೂಟದ ಅಭ್ಯರ್ಥಿಗಳಾದ ಪದವೀಧರ ಕ್ಷೇತ್ರದ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಎಸ್.ಎಲ್.ಭೋಜೇ ಗೌಡ ಅವರ ಪರವಾಗಿ ಮತಯಾಚಿಸಿ, ಇಬ್ಬರೂ ಅಭ್ಯರ್ಥಿಗಳನ್ನು ಅಧಿಕ ಮತಗಳಿಂದ ಗೆಲ್ಲಿಸುವಂತೆ ಎಲ್ಲ ವಕೀಲರುಗಳಲ್ಲಿ ಮನವಿ ಮಾಡಿದರು. ಈ ವೇಳೆ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ನ್ಯಾಯಾಲಯ ಸಂಘದ ಪದಾಧಿಕಾರಿಗಳು, ವಕೀಲರು, ಸ್ಥಳೀಯ ಬಿಜೆಪಿ ಮುಖಂಡರು ಹಾಜರಿದ್ದರು.

LEAVE A REPLY

Please enter your comment!
Please enter your name here