ವಿದ್ಯಾಮಾತಾ ಅಕಾಡೆಮಿಯಲ್ಲಿ ಬೇಸಿಗೆ ಶಿಬಿರದ ಸಮಾರೋಪ – ಬಹುಮಾನ ವಿತರಣೆ

0

ಪುತ್ತೂರು: ಪ್ರತಿಷ್ಠಿತ ಸ್ಪರ್ಧಾತ್ಮಕ ಮತ್ತು ಉದ್ಯೋಗ ಕೌಶಲ್ಯತೆಯ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಒಂದು ತಿಂಗಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ನಡೆಯಿತು. ಒಂದು ತಿಂಗಳ ಬೇಸಿಗೆ ಶಿಬಿರದಲ್ಲಿ ಐದನೇ ತರಗತಿಯಿಂದ ಪ್ರಥಮ ಪಿಯುಸಿ ವರೆಗಿನ ವಿದ್ಯಾರ್ಥಿಗಳು ತರಬೇತಿಯನ್ನು ಪಡೆದಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ತಯಾರಿ, ಪ್ರವೇಶ ಪರೀಕ್ಷೆಗಳಿಗೆ ಪೂರ್ವ ತಯಾರಿ ಬಗ್ಗೆ ತರಬೇತಿಯನ್ನು ನೀಡಲಾಗಿದೆ. ಮಕ್ಕಳ ಬೌದ್ಧಿಕ ಮಟ್ಟ, ಮಾನಸಿಕ ಸಾಮರ್ಥ್ಯವನ್ನು ಹೆಚ್ಚಿಸಲು ಈ ತರಬೇತಿ ಶಿಬಿರವು ಸಹಕಾರಿಯಾಗಿದೆ ಎಂದು ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಜೆ.ಸಿ ಪ್ರಮಿತಾ. ಸಿ. ಹಾಸ್ ರವರು ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲದೇ ಮಕ್ಕಳ ಮಾನಸಿಕ ಸಾಮರ್ಥ್ಯವನ್ನು ಹೆಚ್ಚಿಸಲು ಬೇಕಾಗುವ ಸಲಹೆಗಳನ್ನು ಪ್ರಮಿತಾ ರವರು ಪೋಷಕರಿಗೆ ನೀಡಿದರು. ಶಿಬಿರದಲ್ಲಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.

ಪುತ್ತೂರಿನ ಮೋಹನ್ ಗ್ರಾಫಿಕ್ಸ್ ನ ಮಾಲಕರಾದ ಮೋಹನ್ ಮತ್ತು ಆಶಾ ಮೋಹನ್ ರವರ ಪುತ್ರಿ ಪ್ರಥ್ವಿ ಮುತ್ಲಾಜೆ ಮತ್ತು ಪುತ್ತೂರಿನ ನೆಲ್ಲಿಕಟ್ಟೆ ನಿವಾಸಿಯಾದ ನಿಖಿಲ್ ಶೆಟ್ಟಿ ಮತ್ತು ಪೂನಂ ಶೆಟ್ಟಿ ಅವರ ಪುತ್ರ ಸ್ವಯಂ ಶೆಟ್ಟಿ ಈ ವರ್ಷದ ಚಾಂಪಿಯನ್ಸ್.

ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳನ್ನು ಮತ್ತು ಪೋಷಕರನ್ನು ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ಅವರು ಅಭಿನಂದಿಸಿದರು.

LEAVE A REPLY

Please enter your comment!
Please enter your name here