ಕುಂಬ್ರ: ಎಸ್‌ಎಸ್‌ಎಲ್‌ಸಿ ಪರೀಕ್ಷೆ 610 ಅಂಕ-ಸನ್ನಿಧಿ ಕುರಿಕ್ಕಾರರವರಿಗೆ ಯುವವಾಹಿನಿಯಿಂದ ಸನ್ಮಾನ

0

ಪುತ್ತೂರು: ಕರ್ನಾಟಕ ರಾಜ್ಯ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕದ ವತಿಯಿಂದ 2023-24ನೇ ಸಾಲಿನಲ್ಲಿ 625ಕ್ಕೆ 600ಕ್ಕಿಂತ ಅಧಿಕ ಅಂಕಗಳಿಸಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಪುತ್ತೂರು ತಾಲೂಕಿನ ಬಿಲ್ಲವ ಗ್ರಾಮ ಸಮಿತಿಗಳ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮವು ಮೇ.30 ರಂದು ವಿದ್ಯಾರ್ಥಿಗಳ ಮನೆಗಳಿಗೆ ತೆರಳಿ ಅಭಿನಂದನೆ ಸಲ್ಲುಸುವ ಮೂಲಕ ವಿಶಿಷ್ಟವಾಗಿ ನಡೆಯಿತು.

ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಬಿಲ್ಲವ ಗ್ರಾಮ ಸಮಿತಿ ಕೆದಂಬಾಡಿ ಇದರ ನಾರಾಯಣ ಪೂಜಾರಿ ಕುರಿಕ್ಕಾರ ಮತ್ತು ದಿವ್ಯರವರ ಪುತ್ರಿ ಸನ್ನಿಧಿ ಇವರು 610 ಅಂಕಗಳನ್ನು ಗಳಿಸಿದ್ದು ಇವರನ್ನು ಹೆತ್ತವರ ಹಾಗೂ ಬಂಧುಗಳ ಸಮ್ಮುಖದಲ್ಲಿ ಅವರ ಸ್ವಗೃಹದಲ್ಲಿ ಅಭಿನಂದಿಸಲಾಯಿತು. ಯುವ ವಾಹಿನಿ ಪುತ್ತೂರು ಘಟಕದ ಅಧ್ಯಕ್ಷ ಜಯರಾಮ್ ಬಿ. ಎನ್. ಸ್ವಾಗತಿಸಿ ಮಾತಾನ್ನಾಡುತ್ತಾ ಅಧಿಕ ಅಂಕಗಳಿಸಿ ನಮ್ಮ ಸಮಾಜಕ್ಕೆ ಒಳ್ಳೆಯ ಹೆಸರನ್ನು ತಂದು ಕೊಟ್ಟ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರ ವಿದ್ಯಾಸಾಧನೆಯು ಉತ್ತಮ ರೀತಿಯಲ್ಲಿ ಸಾಗಿ ಭವಿಷ್ಯದಲ್ಲಿ ಅವರು ಹೆತ್ತವರಿಗೂ, ಊರಿಗೂ, ನಮ್ಮ ಸಮಾಜಕ್ಕೂ ಒಳ್ಳೆಯ ಹೆಸರನ್ನು ತರುವಲ್ಲಿಯೂ, ಅದೇ ರೀತಿಯಲ್ಲಿ ದೇಶದಲ್ಲಿ ಸತ್ಪ್ರಜೆಯಾಗಿ ಬಾಳುವಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಕೃಪಾಶೀರ್ವಾದ ಸದಾ ಅವರ ಮೇಲಿರಲಿ ಎಂದು ಶುಭಾರೈಸಿದರು.


ಈ ಸಂದರ್ಭದಲ್ಲಿ ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷ ಜಯರಾಮ ಬಿ. ಎನ್. ಉಪಾಧ್ಯಕ್ಷ ಅಣ್ಣಿ ಪೂಜಾರಿ ಚಿಕ್ಕಮುಡ್ನೂರು, ನಿಕಟಪೂರ್ವ ಅಧ್ಯಕ್ಷರಾದ ಉಮೇಶ್ ಬಾಯಾರ್, ಕಾರ್ಯದರ್ಶಿ ಶಮಿತ್ ಪರ್ಪುಂಜ, ಕೋಶಾಧಿಕಾರಿ ಶರತ್ ಕೈಪಂಗಳ ದೋಳ, ಘಟಕದ ಮಾಜಿ ಅಧ್ಯಕ್ಷ ಉದಯ ಪೂಜಾರಿ ಕೋಲಾಡಿ, ನಿರ್ದೇಶಕರುಗಳಾದ ದಾಮೋದರ ಸುವರ್ಣ ಶಾಂತಿಗೋಡು, ಶಿವಪ್ರಸಾದ್ ಕುಂಬ್ರ, ಹರೀಶ್ ಎಂ. ಕೆ, ಮೋಹನ್ ಶಿಬರ, ನವ್ಯದಾಮೋದರ್ ಶಾಂತಿಗೋಡು, ಕೋಚಣ್ಣ ಪೂಜಾರಿ ಎಂಡೆಸಾಗು, ಬಾಳಪ್ಪ ಸುವರ್ಣ ಬಾಲಯ, ಚೆನ್ನಪ್ಪ ಪೂಜಾರಿ ಕುರಿಕ್ಕಾರ ,ಭವಾನಿ ಚೆನ್ನಪ್ಪ ,ರಂಜಿತ್ ,ರಕ್ಷಿತಾ ಉಪಸ್ಥಿತರಿದ್ದರು. ನಾರಾಯಣ ಪೂಜಾರಿ ಕುರಿಕ್ಕಾರ ಧನ್ಯವಾದ ಅರ್ಪಿಸಿದರು.

LEAVE A REPLY

Please enter your comment!
Please enter your name here