ಸಾಂದೀಪನಿಯಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು ದೀಕ್ಷಾ ಸಮಾರಂಭ

0

ಪುತ್ತೂರು: ನರಿಮೊಗರಿನ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಮೇ.30ರಂದು 2024-25 ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಹಾಗೂ ಶಾಲಾ ಪ್ರಾರಂಭೋತ್ಸವವು ಜರುಗಿತು.


ಅತಿಥಿ ಹಾಗೂ ರಕ್ಷಕ ಶಿಕ್ಷಕ ಸಂಘ ದ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಮೌಲ್ಯಗಳು, ಧನಾತ್ಮಕ ಅಂಶಗಳನ್ನು ಹೆಚ್ಚಿಸಿ ಪರಿಪೂರ್ಣತೆ ಯನ್ನು ಸಾಧಿಸುವ ಪ್ರಯತ್ನ ಮಾಡುವುದು ಎಂದರು.

ಮುಖ್ಯೋಪಾಧ್ಯಾಯಿನಿ ಜಯಮಾಲಾ ವಿ ಎನ್ ಪ್ರಾಸ್ತಾವಿಕ ಮಾತುಗಳೊಂದಿಗೆ ಹೊಸದಾಗಿ ಸೇರಿದ ವಿದ್ಯಾರ್ಥಿಗಳಿಗೆ ದೀಕ್ಷೆ ನೀಡಿದರು. ನಂತರ ಆರತಿ ಬೆಳಗಿ ತಿಲಕವಿಡುವ ಮೂಲಕ ಹೊಸ ವಿದ್ಯಾರ್ಥಿಗಳನ್ನು ಸ್ವಾಗತ ಮಾಡಲಾಯಿತು.

ಸಂಚಾಲಕ ಸಂಚಾಲಕ ಭಾಸ್ಕರ ಆಚಾರ್ ಹಿಂದಾರು ಮಾತನಾಡಿ ಸಮಾಜಕ್ಕೆ ಹಾಗೂ ಕುಟುಂಬಕ್ಕೆ ತೊಂದರೆಯಾಗದಂತೆ ಹಾಗೆ ಬೆಳೆಸುವ ಗುರಿಯನ್ನು ಸಾಂದೀಪನಿ ಶಾಲೆ ಇಟ್ಟು ಕೊಂಡಿದ್ದು ಮುಂದಿನ ದಿನಗಳಲ್ಲಿ ಒಳ್ಳೆಯ ಪ್ರಜೆಗಳಾಗಿ ಇನ್ನೊಬ್ಬರಿಗೆ ಸಹಾಯಹಸ್ತರಾಗಿ ಎಂದರು.

ಸಂಸ್ಥೆಯ ಅಧ್ಯಕ್ಷ ಜಯರಾಮ ಕೆದಿಲಾಯ ಶಿಬರರವರು ಮಾತನಾಡುತ್ತಾ ಪೋಷಕರಿಗೆ ಸಾರ್ಥಕವಾಗುವ ಹಾಗೆ ವಿದ್ಯಾರ್ಥಿಗಳು ಬೆಳೆಯಬೇಕೆಂದು ಉತ್ತಮ ಅಂಕಗಳನ್ನು ಪಡೆದು ಸುಸಂಸ್ಕೃತ ಮಕ್ಕಳಾಗಿ ಬಾಳಿ ಎಂದು ಆಶೀರ್ವದಿಸಿದರು.ಕಾರ್ಯದರ್ಶಿ ಕೃಷ್ಣಪ್ರಸಾದ್ ಕೆದಿಲಾಯ ಸ್ವಾಗತಿಸಿ, ನೀತು ನಾಯಕ್ ವಂದಿಸಿದರು. ಪ್ರಮೀಳಾ ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭದಲ್ಲಿ , ಆಡಳಿತ ಮಂಡಳಿಯ ಸದಸ್ಯರಾದ ಹರೀಶ್ ಪುತ್ತೂರಾಯ ,ಪ್ರಸನ್ನ ಭಟ್, ಅಶೋಕ್ ಪುತ್ತಿಲ ಹಾಗೂ ಶಿಕ್ಷಕ ಶಿಕ್ಷಕೇತರ ವೃಂದ, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here