ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಲೆಕ್ಕಪತ್ರ ಮಂಡನಾ ಸಭೆ

0

ಪುತ್ತೂರು: ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ನಡೆದ ಬ್ರಹ್ಮಕಲಶೋತ್ಸವದ ಲೆಕ್ಕಪತ್ರ ಮಂಡನಾ ಸಭೆಯು ಅಭಿವೃದ್ಧಿ ಸಮಿತಿ ಅಧ್ಯಕ್ಷರು, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಧ್ಯಕ್ಷರು ಆಗಿರುವ ಬೆಂಗಳೂರಿನ ಸೌಂದರ್ಯ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರಾಗಿರುವ ಸೌಂದರ್ಯ ಮಂಜಪ್ಪರವರ ಅಧ್ಯಕ್ಷತೆಯಲ್ಲಿ ಕ್ಷೇತ್ರದಲ್ಲಿ ನಡೆಯಿತು.

ಕಾರ್ಯಾಧ್ಯಕ್ಷರಾದ ಮಂಜಪ್ಪ ಇವರ ಅಧ್ಯಕ್ಷತೆಯಲ್ಲಿ ಕೋಶಾಧಿಕಾರಿ ಮಹಾಬಲ ಗೌಡ ಗಡಿಮಾರೂ ಲೆಕ್ಕ ಪತ್ರ ಮಂಡಿಸಿ ಒಟ್ಟು ರೂ 1,10,66,695 ಸಂಗ್ರಹವಾಗಿದ್ದು ಅದರಲ್ಲಿ ರೂ 94,66,505 ಖರ್ಚಾಗಿದ್ದು, ರೂ16,00,190 ಉಳಿಕೆಯಾಗಿದೆ ಎಂದರು.

ವೇದಿಕೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಧೀರಜ್ ಗೌಡ ಹಿರ್ಕುಡೆಲು, ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾದ ಜನಾರ್ದನ ಎರ್ಕಡಿತ್ತಾಯ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ರಾಮ ಜೋಯಿಸ, ಉತ್ಸವ ಸಮಿತಿ ಅಧ್ಯಕ್ಷರಾದ ಸುಧೀರ್ ಪ್ರಸಾದ್ ಆನಾಜೆ, ಅರ್ಚಕರಾದ ಮುರಳೀಧರ ಬಡಿಕಿಲ್ಲಾಯ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here