ಸರೋಳಿ ನಿವಾಸಿ ಕುಕ್ಕಪ್ಪ ಗೌಡ ನಿಧನ

0

ಹಿರೆಬಂಡಾಡಿ: ಹಿರೆಬಂಡಾಡಿ ಗ್ರಾಮದ ಸರೋಳಿ ನಿವಾಸಿ, ಕೃಷಿಕ ಕುಕ್ಕಪ್ಪ ಗೌಡ(85ವ.)ಅವರು ಅಲ್ಪಕಾಲದ ಅಸೌಖ್ಯದಿಂದ ಮೇ 30ರಂದು ಸ್ವಗೃಹದಲ್ಲಿ ನಿಧನರಾದರು.
ಮೃತರು ಪುತ್ರರಾದ ಪುತ್ತೂರು ನಗರ ಠಾಣೆ ಎಎಸ್‌ಐ ಮೋನಪ್ಪ ಗೌಡ, ಜನಾರ್ದನ ಸರೋಳಿ, ನೀಲಯ್ಯ ಸರೋಳಿ, ಪುತ್ರಿಯರಾದ ಭವಾನಿ, ಮೀನಾಕ್ಷಿ, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.

ಮೃತರ ಮನೆಗೆ ಮಾಜಿ ಶಾಸಕ ಸಂಜೀವ ಮಠಂದೂರು, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ನಾರಾಯಣ ಕನ್ಯಾನ, ಹಿರೆಬಂಡಾಡಿ ಗ್ರಾ.ಪಂ.ಅಧ್ಯಕ್ಷ ಸದಾನಂದ ಶೆಟ್ಟಿ ಅಡೆಕ್ಕಲ್, ಸದಸ್ಯರಾದ ಹಮ್ಮಬ್ಬ ಶೌಕತ್ ಆಲಿ, ನಿತಿನ್ ತಾರಿತ್ತಡಿ, ಚಂದ್ರಾವತಿ ನೆಹರುತೋಟ, ಮಾಜಿ ಸದಸ್ಯರಾದ ವಿಶ್ವನಾಥ ಕೆಮ್ಮಟೆ, ಜನಾರ್ದನ ಅನಂತಿಮಾರು, ಕೊಯಿಲ ಗ್ರಾ.ಪಂ.ಸದಸ್ಯೆ ಕಮಲಾಕ್ಷಿ ಪಾಜಳಿಕೆ ಮತ್ತಿತರರು ಭೇಟಿ ನೀಡಿ ಸಂತಾಪ ಸೂಚಿಸಿದರು.

LEAVE A REPLY

Please enter your comment!
Please enter your name here