ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಮುಂಡತ್ತಡ್ಕ ಶ್ರೀ ಮಾರಿಯಮ್ಮ ದೇವಸ್ಥಾನಕ್ಕೆ 50,000 ದೇಣಿಗೆ ಹಸ್ತಾಂತರ

0

ಸವಣೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ ಇದರ ವತಿಯಿಂದ ಕಡಬ ತಾಲ್ಲೂಕು ಸವಣೂರು ಗ್ರಾಮದ ಮುಂಡತ್ತಡ್ಕ ಶ್ರೀ ಮಾರಿಯಮ್ಮ ದೇವಸ್ಥಾನ ಜೀರ್ಣೋದ್ಧಾರ ಅಂಗವಾಗಿ ಕ್ಷೇತ್ರದ ವತಿಯಿಂದ ರೂ 50000 ಡಿ ಡಿಯನ್ನು ಕಡಬ ತಾಲ್ಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಮಹೇಶ್ ಕೆ ಸವಣೂರು ರವರು ಶ್ರೀ ಮಾರಿಯಮ್ಮ ದೇವಸ್ಥಾನ ದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಿನೇಶ್ ಮೆದು ,ಕಾರ್ಯದರ್ಶಿ ತಾರಾನಾಥ ಕಾಯರ್ಗರವರಿಗೆ ಹಸ್ತಾಂತರ ಮಾಡಲಾಯಿತು.

ತಾಲ್ಲೂಕು ಕೃಷಿ ಅಧಿಕಾರಿ ಸೋಮೇಶ್,ಸವಣೂರು ಸೇವಾ ಪ್ರತಿನಿಧಿ ಪ್ರೇಮ ಆರೆಲ್ತಡಿ,ಟ್ರಸ್ಟ್ ನ ಅಧ್ಯಕ್ಷ ಬಾಬು ,ಗೌರವಸಲಹೆಗಾರ ರಾದ ಕಿನ್ನಿಗ ಆರ್,ಕಾರ್ಯದರ್ಶಿ ಕಿರಣ್ ಕುಮಾರ್ ಜಿ, ಮೊದಲಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here