![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ನೆಲ್ಯಾಡಿ: ಬೊಲೆರೋ ಜೀಪು ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಎರಡೂ ವಾಹನಗಳು ಜಖಂಗೊಂಡ ಘಟನೆ ಮೇ.21ರಂದು ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಸೌತಡ್ಕ-ಕೊಕ್ಕಡ ರಸ್ತೆಯ ನೆಕ್ಕರ್ಲ ಎಂಬಲ್ಲಿ ನಡೆದಿದೆ.
![](https://puttur.suddinews.com/wp-content/uploads/2024/06/nekkarla.jpg)
ಧರ್ಮಸ್ಥಳ ಗ್ರಾಮದ ನೇತ್ರಾವತಿ ನಿವಾಸಿ ಶಿವಪ್ಪ ಗೌಡ ಎಂಬವರು ಬೊಲೆರೋ ಜೀಪುನಲ್ಲಿ ಅಡಿಕೆಯನ್ನು ಕೊಂಡೊಯ್ಯುತ್ತಿರುವಾಗ ಕೌಕ್ರಾಡಿ ಗ್ರಾಮದ ಸೌತಡ್ಕ-ಕೊಕ್ಕಡ ರಸ್ತೆಯ ನೆಕ್ಕರ್ಲ ಎಂಬಲ್ಲಿಗೆ ತಲುಪುತ್ತಿದ್ದಂತೆ ಕೊಕ್ಕಡದಿಂದ ಸೌತಡ್ಕ ದೇವಸ್ಥಾನದ ಕಡೆಗೆ ಬರುತ್ತಿದ್ದ ಕಾರಿನ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಎರಡು ವಾಹನಗಳು ಜಖಂಗೊಂಡಿದ್ದು ವಾಹನದಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಕಾರು ಚಾಲಕನ ಅಜಾಗರೂಕತೆಯಿಂದ ಅಪಘಾತ ನಡೆದಿದೆ ಎಂದು ಬೊಲೆರೋ ಚಾಲಕ ಶಿವಪ್ಪ ಗೌಡ ಅವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.