ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮತ ಚಲಾವಣೆ

0

ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿರವರು ಹಾಗೂ ಅವರ ಪತ್ನಿ ಶ್ರೀಮತಿ ನಮಿತಾರೊಂದಿಗೆ ಜೂ.3 ರ ಬೆಳಗ್ಗೆ ಶಿವಮೊಗ್ಗ ವಿನೋಬ ನಗರದ ದೇಶೀಯ ವಿದ್ಯಾ ಶಾಲಾ ಹೈಸ್ಕೂಲ್ ವಿಭಾಗದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ನೈರುತ್ಯ ಪದವೀಧರ ಮತ್ತು ಶಿಕ್ಚಕರ ಕ್ಷೇತ್ರಕ್ಕೆ ಇಂದಿನಿಂದ ಮತದಾನ ಆರಂಭವಾಗಿದೆ. ನೋಂದಣಿಗೊಂಡ ಪದವೀಧರರು ಮತ್ತು ಶಿಕ್ಷಕರು ಮತದಾನ ನಡೆಯುತ್ತಿದೆ. ಶಿವಮೊಗ್ಗ, ಚನ್ನಗಿರಿ, ಹೊನ್ನಾಳಿ, ಚಿಕ್ಕಮಗಳೂರು, ಉಡುಪಿ, ಮಂಗಳೂರು, ಕೊಡಗು ಜಿಲ್ಲೆಯಲ್ಲಿ ಇದರ ಮತದಾನ ಆರಂಭವಾಗಿದೆ. ಇಂದಿನಿಂದ 9 ಗಂಟೆಯಿಂದ ಸಂಜೆ 4ರವರೆಗೆ ನಡೆಯಲಿದೆ.

ಪದವೀಧರ ಕ್ಷೇತ್ರದಲ್ಲಿ 84 ಸಾವಿರ ಮತದಾರರು ಮತಚಲಾಯಿಸಿದರೆ ಶಿಕ್ಷಕರ ಕ್ಷೇತ್ರದಲ್ಲಿ 25 ಸಾವಿರ ಮತಗಳು ಚಲಾವಣೆಗೊಳ್ಳಲಿದೆ. ಜಿಲ್ಲೆಯಲ್ಲಿ 70 ಪದವೀಧರ ಮತ್ತು ಶಿಕ್ಷಕರ ಮತಗಟ್ಟೆಗಳಿವೆ.

LEAVE A REPLY

Please enter your comment!
Please enter your name here