ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

0

ಪುತ್ತೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು ( 6 ರಿಂದ 10ನೇ ತರಗತಿ) ಗಳಿಗೆ ವಾರ್ಷಿಕ ರೂ.10,೦೦೦ದಂತೆ ಪ್ರೊತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದ್ದು ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಅರ್ಜಿದಾರರು 2023-24ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು 6 ನೇ ರಿಂದ 10ನೇ ತರಗತಿಯಲ್ಲಿ ಓದುತ್ತಿರಬೇಕು. ರಾಜ್ಯ ಕ್ರೀಡಾ ಪ್ರಾಧಿಕಾರದಿಂದ ನೋಂದಾಯಿತವಾದ ಕ್ರೀಡಾ ಸಂಸ್ಥೆಗಳು ದಿನಾಂಕ 1-೦4-2023ರಿಂದ 31-೦3-2024 ರವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ಭಾರತ ಸರಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಅಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸರಬೇಕು. ಅಂದರೆ ದಿನಾಂಕ 1-04-2023 ರಿಂದ 31-೦3-2024ರ ಅವಧಿಯಲ್ಲಿ ನಡೆದ ಕ್ರೀಡಾಕೂಟಗಳಲ್ಲಿನ ಸಾಧನೆಗಳನ್ನು ಮಾತ್ರ ಪರಿಗಣಿಸಲಾಗುವುದು. ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ. ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ. ಒಬ್ಬ ಕ್ರೀಡಾಪಟು ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ವಿದ್ಯಾರ್ಥಿ ವೇತನ ಮೊತ್ತಕ್ಕೆ ಮಾತ್ರ ಅರ್ಹರಾಗಿರುತ್ತಾರೆ. ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಹತೆಯಿರುವ ಕ್ರೀಡಾಪಟುಗಳು http://sevasindhuservices.karnataka.gov in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿಸಲ್ಲಿಸಲು ಜೂ.30 ಅಂತಿಮ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ 9164502107 ನಂಬರನ್ನು ಸಂಪರ್ಕಿಸಬಹುದು ಎಂದು ತಾಲೂಕು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮೇಲ್ವಿಚಾರಕರಾದ ಶ್ರೀಕಾಂತ್ ಪೂಜಾರಿ ಬಿರಾವು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here