ಕ್ಯಾ.ಬ್ರೀಜೇಶ್ ಚೌಟ ಗೆಲುವು-ತಿಂಗಳಾಡಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

0

ಪುತ್ತೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರೀಜೇಶ್ ಚೌಟರವರ ಅಭೂತಪೂರ್ವ ಗೆಲುವಿನ ಹಿನ್ನೆಲೆಯಲ್ಲಿ ಕೆದಂಬಾಡಿ ಗ್ರಾಮದ ಬಿಜೆಪಿ ಕಾರ್ಯಕರ್ತರು ತಿಂಗಳಾಡಿ ಜಂಕ್ಷನ್‌ನಲ್ಲಿ ಸಂಭ್ರಮಾಚರಣೆ ನಡೆಸಿದರು. ಪ್ರಧಾನಿ ಮೋದಿಯವರಿಗೆ ಹಾಗೂ ಕ್ಯಾ.ಬ್ರೀಜೇಶ್ ಚೌಟರವರಿಗೆ ಜೈಕಾರ ಕೂಗಿದರು.

ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡ, ಸಹಕಾರ ಭಾರತಿ ತಾ.ಅಧ್ಯಕ್ಷ ಕೃಷ್ಣ ಕುಮಾರ್ ರೈ ಕೆದಂಬಾಡಿಗುತ್ತು, ಕೆದಂಬಾಡಿ ಗ್ರಾಪಂ ಅಧ್ಯಕ್ಷೆ ಸುಜಾತ ಮುಳಿಗದ್ದೆ, ಬಿಜೆಪಿ ಬೂತ್ ಅಧ್ಯಕ್ಷ ಬಾಲಚಂದ್ರ ರೈ ಚಾವಡಿ, ಕಾರ್ಯದರ್ಶಿ ಶರತ್ ಕುಮಾರ್ ಗುತ್ತು, ಅಮರ್ ರೈ ದರ್ಬೆ, ಜಯರಾಮ ರೈ ಮಿತ್ರಂಪಾಡಿ, ಜಯರಾಮ ರೈ ಬಾಳಯ, ಜಯಾನಂದ ರೈ ಮಿತ್ರಂಪಾಡಿ, ಗೀತಾ ಗುತ್ತು ಸೇರಿದಂತೆ ಹಲವು ಮಂದಿ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here