ಕುಂಬ್ರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

0

ಪುತ್ತೂರು: ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬ್ರಿಜೇಶ್ ಚೌಟರವರ ಅಭೂತಪೂರ್ವ ಗೆಲುವಿನ ಹಿನ್ನೆಲೆಯಲ್ಲಿ ಒಳಮೊಗ್ರು ಗ್ರಾಮದ ಬಿಜೆಪಿ ಕಾರ್ಯಕರ್ತರು ಕುಂಬ್ರ ಜಂಕ್ಷನ್‌ನಲ್ಲಿ ಸಂಭ್ರಮಾಚರಣೆ ನಡೆಸಿದರು. ಪ್ರಧಾನಿ ಮೋದಿಯವರಿಗೆ ಜೈಕಾರ ಹಾಕುವ ಮೂಲಕ ಸಂಭ್ರಮಿಸಿದ ಕಾರ್ಯಕರ್ತರು ಬ್ರಿಜೇಶ್ ಚೌಟರವರಿಗೆ ಜೈಕಾರ ಹಾಕಿದರು. ಬಳಿಕ ಸಿಹಿ ತಿಂಡಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.


ಈ ಸಂದರ್ಭದಲ್ಲಿ ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ, ಬೂತ್ ಅಧ್ಯಕ್ಷ ಎಸ್.ಮಾಧವ ರೈ ಕುಂಬ್ರ, ಕೆದಂಬಾಡಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ನಾರಾಯಣ ಪೂಜಾರಿ ಕುರಿಕ್ಕಾರ, ಬೂತ್ ಅಧ್ಯಕ್ಷರುಗಳಾದ ಪ್ರವೀಣ್ ಪಲ್ಲತ್ತಾರು, ರಾಧಾಕೃಷ್ಣ ಶೆಟ್ಟಿ ಕಲ್ಲಡ್ಕ, ಪುರಂದರ ಶೆಟ್ಟಿ ಮುಡಾಲ, ಕಾರ್ಯದರ್ಶಿ ಶ್ರೀನಿವಾಸ ಮುಡಾಲ, ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ, ಗ್ರಾಪಂ ಸದಸ್ಯರುಗಳಾದ ಪ್ರದೀಪ್ ದರ್ಬೆತ್ತಡ್ಕ, ರೇಖಾ, ರಾಮಕೃಷ್ಣ ನಾಯ್ಕ ಮುಡಾಲ, ಸುಧಾಕರ ಆಳ್ವ ಕಲ್ಲಡ್ಕ, ಜಯರಾಮ ಆಚಾರ್ಯ, ನೇಮಿರಾಜ್ ಕುರಿಕ್ಕಾರ, ರಾಕೇಶ್ ರೈ ಪರ್ಪುಂಜ, ರವಿ ಬೊಳ್ಳಾಡಿ ಸೇರಿದಂತೆ ಹಲವು ಮಂದಿ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here