ನೆಲ್ಯಾಡಿ ಬಿಜೆಪಿ ಮಹಾಶಕ್ತಿಕೇಂದ್ರದಿಂದ ಸಂಭ್ರಮಾಚರಣೆ

0

ನೆಲ್ಯಾಡಿ: ದ.ಕ.ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಅವರ ಭರ್ಜರಿ ಗೆಲುವು ಹಾಗೂ ಕೇಂದ್ರದಲ್ಲಿ ಎನ್‌ಡಿಎ ಸರಕಾರ ಮತ್ತೆ ಅಧಿಕಾರಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ನೆಲ್ಯಾಡಿ ಬಿಜೆಪಿ ಮಹಾಶಕ್ತಿಕೇಂದ್ರದ ವತಿಯಿಂದ ನೆಲ್ಯಾಡಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಿಸಲಾಯಿತು.
ನೆಲ್ಯಾಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿಪ್ರಸಾದ್ ಶೆಟ್ಟಿ, ಕೌಕ್ರಾಡಿ ಗ್ರಾ.ಪಂ.ಅಧ್ಯಕ್ಷ ಲೋಕೇಶ್ ಬಾಣಜಾಲು, ಸದಸ್ಯ ಉದಯಕುಮಾರ್, ನೆಲ್ಯಾಡಿ ಗ್ರಾ.ಪಂ.ಸದಸ್ಯ ಆನಂದ ಪಿಲವೂರು, ಪಡುಬೆಟ್ಟು ಬೂತ್ ಅಧ್ಯಕ್ಷ ಬಿ.ರಮೇಶ ಶೆಟ್ಟಿ, ನೆಲ್ಯಾಡಿ ಬೂತ್ ಅಧ್ಯಕ್ಷ ಉಮೇಶ್ ಪೂಜಾರಿ, ಪ್ರಮುಖರಾದ ರವಿಚಂದ್ರ ಹೊಸವೊಕ್ಲು, ರವಿಚಂದ್ರ ಅತ್ರಿಜಾಲು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here