ಕುಟ್ರುಪ್ಪಾಡಿ ಹಳೆಸ್ಟೇಷನ್ ನ ಅಮೃತ ಸರೋವರದಲ್ಲಿ ಗಿಡ ನೆಡುವ ಕಾರ್ಯಕ್ರಮ

0

ಕಡಬ: ತಾಲೂಕು ಪಂಚಾಯತ್ ಕಡಬ ಹಾಗೂ ಗ್ರಾಮ ಪಂಚಾಯತ್ ಕುಟ್ರುಪಾಡಿ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಳೆಸ್ಟೇಷನ್ ಬಳಿ ಇರುವ ಅಮೃತ ಸರೋವರ ಕೆರೆ ಬದಿಯಲ್ಲಿ ಗಿಡಗಳನ್ನು ನೆಡಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾದ ಚೆನ್ನಪ್ಪ ಗೌಡ, ಅರಣ್ಯಾಧಿಕಾರಿ ಅಜಿತ್, ಕೆರೆ ಅಭಿವೃದ್ದಿ ಸಮಿತಿ ಅಧ್ಯಕ್ಷರಾದ ಶಿವರಾಮ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ಮೋನಪ್ಪ ಗೌಡ, ತಾಲೂಕು ಪಂಚಾಯತ್ ಸಿಬ್ಬಂದಿವರ್ಗ, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ದಿ ಅಧಿಕಾರಿ ಆನಂದ ಎ ಸ್ವಾಗತಿಸಿ ಸಹಕರಿಸಿದರು.

LEAVE A REPLY

Please enter your comment!
Please enter your name here