ರೈ ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ

0

ಸಮಾಜ ಸೇವೆಯೇ ಟ್ರಸ್ಟ್ ನ ಪ್ರಮುಖ ಧ್ಯೇಯ: ಸುದೇಶ್ ಶೆಟ್ಟಿ


ಪುತ್ತೂರು: ಸಮಾಜದಲ್ಲಿ ನೊಂದವರ ಮತ್ತು ಬಡವರ ಸೇವೆಯೇ ನಮ್ಮ ಟ್ರಸ್ಟ್ ನ ಮೂಲ ಧ್ಯೇಯವಾಗಿದೆ ಎಂದು ರೈ ಎಸ್ಟೇಟ್ಸ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ ಹೇಳಿದರು.


ಅವರು ತಾಲೂಕಿನ ಕೊಡಿಪ್ಪಾಡಿ ಗ್ರಾಮದ ಅರ್ಕ ಸ.ಹಿ .ಪ್ರಾ . ಶಾಲೆ ಯ ವಿದ್ಯಾರ್ಥಿ ಗಳಿಗೆ ರೈ ಎಸ್ಟೇಟ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ನ ಸದಸ್ಯರಾದ ಇಬ್ರಾಹಿಂ , ಖಾದರ್ ಕಲ್ಲಂದಡ್ಕ ಮತ್ತು ಬಾಲಕೃಷ್ಣ ಇವರು ಛತ್ರಿಗಳನ್ನು ಕೊಡುಗೆಯಾಗಿ ನೀಡಿದ್ದು, ವಿದ್ಯಾರ್ಥಿಗಳಿಗೆ ಛತ್ರಿ ವಿತರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕೊಡಿಪ್ಪಾಡಿ ಗ್ರಾಪಂ ಅಧ್ಯಕ್ಷ ಸೋಮಪ್ಪ ಪೂಜಾರಿ , ಕೇಶವ ಪೆಲತ್ತಡಿ ,ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಸುರೇಖಾ ಹಾಗೂ ಪೋಷಕ ರು ಉಪಸ್ಥಿತರಿದ್ದರು. ಶಿಕ್ಷಕಿ ಚಿತ್ರಕಲಾ ಸ್ವಾಗತಿಸಿದರು. ಸಹ ಶಿಕ್ಷಕಿ ಅಶ್ವಿನಿ ವಂದಿಸಿದರು.

LEAVE A REPLY

Please enter your comment!
Please enter your name here