ಶಾಂತಿನಗರ ಶಾಲೆಯಲ್ಲಿ ವಿಶ್ವಪರಿಸರ ದಿನಾಚರಣೆ, ಶ್ರಮದಾನ

0

ನೆಲ್ಯಾಡಿ: ಸರಕಾರಿ ಹಿ.ಪ್ರಾ.ಶಾಲೆ ಶಾಂತಿನಗರ ಗೋಳಿತ್ತಟ್ಟು ಇಲ್ಲಿ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.


ಶಾಲಾ ಆವರಣ ಸ್ವಚ್ಛತೆ, ಶಾಲಾ ಹೂ ತೋಟದ ಸೌಂದರ್ಯೀಕರಣ, ಗಿಡಗಳ ನೆಡುವಿಕೆ ಹಾಗೂ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸುವುದರ ಮೂಲಕ ವಿಶ್ವಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು, ಎಸ್‌ಡಿಎಂಸಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು. ಎಸ್‌ಡಿಎಂಸಿ ಅಧ್ಯಕ್ಷರಾದ ಪುರುಷೋತ್ತಮ ಪೂಜಾರಿ ಹಾಗೂ ಶಾಲಾ ಶಿಕ್ಷಕರು ಸಹಕರಿಸಿದರು.

LEAVE A REPLY

Please enter your comment!
Please enter your name here