ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲಾ ಮೂವರು ವಿದ್ಯಾರ್ಥಿನಿಯರು ಎನ್.ಎಮ್.ಎಮ್.ಎಸ್ ಪರೀಕ್ಷೆಯಲ್ಲಿ ಆಯ್ಕೆ

0

ಪುತ್ತೂರು:ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಬೆಂಗಳೂರು, ಇವರು 2023-24ನೇ ಸಾಲಿನಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿಗಳಿಗಾಗಿ ನಡೆಸಿದ ಎನ್.ಎಮ್.ಎಮ್.ಎಸ್ ಪ್ರತಿಭಾನ್ವೇಷಣಾ ಪರೀಕ್ಷೆಯಲ್ಲಿ ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯ ವಿದ್ಯಾರ್ಥಿನಿಯರಾದ ಧೃತಿ, ಖುಷಿ ಕೆ.ಎಂ ಹಾಗೂ ಮಾನ್ಯತಾ ಎ ರವರು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾರೆ.

ದೃತಿಯವರು ಸತೀಶ್ ಮತ್ತು ಶಾಂತ ದಂಪತಿ ಪುತ್ರಿ. ಖುಷಿ ಕೆ ಎಂರವರು ಕೆ.ವಿ ಮಂಜುನಾಥ ಮತ್ತು ಭವ್ಯ ದಂಪತಿ ಪುತ್ರಿ ಹಾಗೂ ಮಾನ್ಯತಾ ಎ. ಆನಂದ ಆಚಾರ್ಯ ಮತ್ತು ಸುಜಾತಾ ಎ ದಂಪತಿ ಪುತ್ರಿ. ಇವರು ಎನ್.ಎಂ.ಎಂ.ಎಸ್ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾರೆ ಎಂದು ಮುಖ್ಯ ಶಿಕ್ಷಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here