ಗುರುಬೆಳದಿಂಗಳು ಫೌಂಡೇಶನ್ ನಿಂದ ಕೊಡಿಪ್ಪಾಡಿ ಅನಿಲ್ ಪೂಜಾರಿ ಕುಟುಂಬಕ್ಕೆ ಆರ್ಥಿಕ ನೆರವು- ಚೆಕ್ ವಿತರಿಸಿದ ಆರ್ ಪದ್ಮರಾಜ್

0

ಪುತ್ತೂರು:ಕೊಡಿಪ್ಪಾಡಿ‌ ಗ್ರಾಮದ ಬಟ್ರುಪ್ಪಾಡಿ ನಿವಾಸಿ ದಿ. ಅನಿಲ್ ಪೂಜಾರಿಯವರ‌ ಮಕ್ಕಳ ವಿದ್ಯಾಬ್ಯಾಸಕ್ಕಾಗಿ ಗುರು ಬೆಳದಿಂಗಳು ಫೌಂಡೇಶನ್ ವತಿಯಿಂದ ಫೌಂಡೇಶನ್ ಅಧ್ಯಕ್ಷ ಪದ್ಮರಾಜ್ ಆರ್ ಪೂಜಾರಿಯವರು ಮನೆಗೆ ಭೇಟಿ ನೀಡಿ ಆರ್ಥಿಕ ನೆರವು ನೀಡಿದರು.

ಈ ಸಂದರ್ಭದಲ್ಲಿ‌ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ.‌ರಾಜಾರಾಂ, ಹಿಂದುಳಿದ ವರ್ಗ ಬ್ಲಾಕ್ ಅಧ್ಯಕ್ಷ ಮೋಹನ್ ಗುರ್ಜಿನಡ್ಕ, ಕೊಡಿಪ್ಪಾಡಿ ವಲಯ ಅಧ್ಯಕ್ಷ ಕೇಶವ ಪೆಲತ್ತಡಿ, ಪ್ರವೀಣ್ ಶೆಟ್ಟಿ ಅಳಕೆಮಜಲು, ನೌಶಾದ್ , ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ, ದಾಮೋದರ ಮುರ, ನಗರ ಸಭಾ ಸದಸ್ಯ ರಿಯಾಝ್ ಪರ್ಲಡ್ಕ, ಶರತ್ ಕೇಫುಳು, ಯಂಗ್ ಬ್ರಿಗೆಡ್ ರಾಜ್ಯಾಧ್ಯಕ್ಷ ಜುನೈದ್ ಪಿ ಕೆ, ಮೆಸ್ಕಾಮ ಸಲಹ‌ಸಮಿತಿ ಸದಸ್ಯರಾದ ಚಂದ್ರ ಶೇಖರ ಕಲ್ಲಗುಡ್ಡೆ, ಚಂದ್ರ ಅರ್ಕ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here