ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನದ ಪ್ರಯುಕ್ತ ವಿಕಾಸ ವನ- ಗಿಡ ಮೂಲಿಕೆಗಳ ಉದ್ಯಾನವನ ಉದ್ಘಾಟನೆ

0

ವನಮಹೋತ್ಸವ ಕೇವಲ ಗಿಡ ನೆಡುವುದಕ್ಕೆ ಸೀಮಿತವಾಗಿರದೆ, ಅದರ ಪಾಲನೆ ಪೋಷಣೆ ಮಾಡಬೇಕು: ಪ್ರಹ್ಲಾದ್ ಶೆಟ್ಟಿ ಜೆ.

ವಿಟ್ಲ:ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ವಿಕಾಸ ವನ- ಗಿಡ ಮೂಲಿಕೆಗಳ ಉದ್ಯಾನವನವನ್ನು ಉದ್ಘಾಟಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಾಲವಿಕಾಸ ಟ್ರಸ್ಟ್ ನ ಅಧ್ಯಕ್ಷರಾದ ಪ್ರಹ್ಲಾದ್ ಶೆಟ್ಟಿ ಜೆ.ರವರು ಕಹಿಬೇವಿನ ಸಸಿ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ‌ಅವರು ಪ್ರತಿವರ್ಷವೂ ವನಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ವನಮಹೋತ್ಸವ ಕೇವಲ ಗಿಡ ನೆಡುವುದಕ್ಕೆ ಸೀಮಿತವಾಗಿರದೆ, ಅದರ ಪಾಲನೆ ಪೋಷಣೆ ಮಾಡಬೇಕು. ದೇಶದ ಜವಾಬ್ದಾರಿಯುತ ಪ್ರಜೆಗಳಾದ ನಾವೆಲ್ಲರೂ ಮುಂದಿನ ಪೀಳಿಗೆಗೆ ಒಳ್ಳೆಯ ಪರಿಸರವನ್ನು ನಿರ್ಮಿಸಬೇಕು ಎಂದರು.

ಬಾಲವಿಕಾಸ ಟ್ರಸ್ಟ್ ನ ಕಾರ್ಯದರ್ಶಿ ಮಹೇಶ್ ಶೆಟ್ಟಿ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಹಶಿಕ್ಷಕಿ ಯಶೋಧ ಕೆ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here