ವಿವೇಕಾನಂದ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭ

0

ಪುತ್ತೂರು: ವಿವೇಕಾನಂದ ಕಾಲೇಜಿನ ಗ್ರಂಥಾಲಯದಲ್ಲಿ ದೀರ್ಘ ಕಾಲದ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ದ್ವಿತೀಯ ದರ್ಜೆ ಸಹಾಯಕ ಕದುರಪ್ಪ ಹಾಗೂ ಅಟೆಂಡರ್ ಆಗಿ ಕಾರ್ಯ ನಿರ್ವಹಿಸಿದ ಶಿವಕುಮಾರ್. ಎಚ್ ಇವರಿಗೆ ಕಾಲೇಜಿನ ಬೈಂದೂರು ಪ್ರಭಾಕರ್ ರಾವ್ ಸಭಾಭವನದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ.ಶ್ರೀಪತಿ ಕಲ್ಲೂರಾಯ,ಸಂಚಾಲಕ ಮುರಳಿಕೃಷ್ಣ ಕೆ.ಎನ್, ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್, ಅಧ್ಯಾಪಕ ಸಂಘದ ಅಧ್ಯಕ್ಷ ಡಾ.ಸೌಮಿತ್ರ, ಅಧ್ಯಾಪಕೇತರ‌ ಸಂಘದ ಅಧ್ಯಕ್ಷ ಗುರುರಾಜ್ ಕೆ.ಪಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here