![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
![](https://puttur.suddinews.com/wp-content/uploads/2024/06/ramakunja-1.jpeg)
ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆ ಮತ್ತು ವಿಶ್ವೇಶ ಸ್ಕೌಟ್-ಗೈಡ್ ಮತ್ತು ಕಬ್ಸ್ ಬುಲ್ ಬುಲ್ ದಳ ಇದರ ಆಶ್ರಯದಲ್ಲಿ ವಿಶ್ವ ಪರಿಸರ ದಿನವನ್ನು ಜೂ.5ರಂದು ವಿದ್ಯಾರ್ಥಿಗಳು ಗಿಡ ನೆಡುವ ಮೂಲಕ ಆಚರಿಸಲಾಯಿತು.
ಸಂಸ್ಥೆಯ ಆಡಳಿತ ಅಧಿಕಾರಿ ಆನಂದ ಎಸ್.ಟಿ ಅವರು ವಿಶ್ವ ಪರಿಸರ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರು ವಿದ್ಯಾರ್ಥಿಗಳು ಪ್ರತೀ ವರ್ಷ ಗಿಡ ನೆಡುವಂತೆ ಪ್ರೇರೇಪಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪಕರಾದ ರಮೇಶ್ ರೈ ಆರ್ ಬಿ, ಪ್ರೌಢಶಾಲಾ ಮುಖ್ಯಗುರು ಗಾಯತ್ರಿ ಯು.ಎನ್, ಪ್ರಾಥಮಿಕ ಶಾಲಾ ಮುಖ್ಯಗುರು ಲೋಹಿತ ಎ ಹಾಗೂ ಸ್ಕೌಟ್-ಗೈಡ್ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.