ದ.ಕ ಪ.ಪೂ ಕಾಲೇಜು ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷರಾಗಿ ಹರಿಪ್ರಕಾಶ್ ಬೈಲಾಡಿ

0

ಪುತ್ತೂರು:ದಕ್ಷಿಣ ಕನ್ನಡ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷರಾಗಿ ಬೆಳಿಯೂರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಹರಿಪ್ರಕಾಶ್ ಬೈಲಾಡಿಯವರು ಆಯ್ಕೆಯಾಗಿದ್ದಾರೆ.


ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಸಿದ್ಧಕಟ್ಟೆ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಶೀನಪ್ಪ ಎನ್, ಕೋಶಾಧಿಕಾರಿಯಾಗಿ ಕಪಿತಾನಿಯೋ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಅನಿತಾ ಫ್ರಾಂಕ್, ಉಪಾಧ್ಯಕ್ಷರಾಗಿ ಬಲ್ಮಠ ಕಾಲೇಜಿನ ಉಪನ್ಯಾಸಕ ಉಮೇಶ್ ಕೆ.ಆರ್., ಬೆಸೆಂಟ್ ನ್ಯಾಷನಲ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ರೂಪಾಕ್ಷ ಎಂ., ಸಂತ ಅಲೋಶಿಯಸ್ ಕಾಲೇಜಿನ ಉಪನ್ಯಾಸಕ ಕಿರಣ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ.


ದ.ಕ ಜಿಲ್ಲೆಯ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕ ವೃತ್ತಿ ಸಂಬಂಧಿತ ಶ್ರೇಯೋಭಿವೃದ್ಧಿಗಾಗಿ ಸಂಘವು ಸ್ಥಾನಪನೆಗೊಂಡಿದೆ.
ಹರಿಪ್ರಕಾಶ್ ಬೈಲಾಡಿಯವರು ರಾಜ್ಯಶಾಸ್ತ್ರ ಉಪನ್ಯಾಸಕರ ಸಂಘದ ಜಿಲ್ಲಾ ಅಧ್ಯಕ್ಷರಾಗಿ, ಅರೆಕಾಲಿಕ ಉಪನ್ಯಾಸಕರ ಸಂಘದ ರಾಜ್ಯ ಕೋಶಾಧಿಕಾರಿಯಾಗಿಯೂ ಸೇವೆ ಸಲ್ಲಿಸಿರುತ್ತಾರೆ. ಇವರು ಪ್ರಸ್ತುತ ಪುತ್ತೂರು ತಾಲೂಕು ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ತಾಲೂಕು ಅಧ್ಯಕ್ಷರಾಗಿ, ತಾಲೂಕು ಸರಕಾರಿ ನೌಕರರ ಸಂಘದ ಹಿರಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಇವರು ಇರ್ದೆ ಗ್ರಾಮದ ಬೀಡು ನಿವಾಸಿಯಾಗಿದ್ದಾರೆ.

LEAVE A REPLY

Please enter your comment!
Please enter your name here