ಕೊಳ್ತಿಗೆ ಗ್ರಾಪಂ ಬಿಲ್ ಕಲೆಕ್ಟರ್ ಜಯ ಎಸ್ ಆತ್ಮಹತ್ಯೆ

0

ಪುತ್ತೂರು: ಕೊಳ್ತಿಗೆ ಗ್ರಾಮ ಪಂಚಾಯತ್ ನ ಬಿಲ್ ಕಲೆಕ್ಟರ್ ಜಯ ಎಸ್ ಶೇಡಿಗುರಿ ( 38 ವ) ರವರು ಆತ್ಮಹತ್ಯೆಗೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಕೊಳ್ತಿಗೆ ಗ್ರಾಮದ ಶೇಡಿಗುರಿ ನಿವಾಸಿಯಾಗಿರುವ ಇವರು ಜೂ.11 ರಂದು ಬೆಳಿಗ್ಗೆ ತಮ್ಮ ಮನೆಯ ಅಡುಗೆ ಕೋಣೆಯಲ್ಲಿ ಪಕ್ಕಾಸಿಗೆ ಹುರಿ ಹಗ್ಗ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರು ಕಳೆದ 15 ವರ್ಷಗಳಿಂದ ಕೊಳ್ತಿಗೆ ಗ್ರಾಮ ಪಂಚಾಯಿತಿನಲ್ಲಿ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೃತರು ಪತ್ನಿ ಸೌಮ್ಯ ಪುತ್ರರಾದ ಪ್ರಜ್ಞೇಶ್ ಮತ್ತು ಹವ್ಯಾಶ್ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.

LEAVE A REPLY

Please enter your comment!
Please enter your name here