ಜೂ.14ಕ್ಕೆ ʼತುಡರ್ʼ ಚಿತ್ರ ಪುತ್ತೂರು ಭಾರತ್ ಸೀನೆಮಾಸ್ ನಲ್ಲಿ ಬಿಡುಗಡೆ

0

ಪುತ್ತೂರು: ಸುಮುಖ ಪ್ರೊಡಕ್ಷನ್ಸ್‌ ಲಾಂಛನದಲ್ಲಿ ತಯಾರಾದ “ತುಡರ್‌’ ತುಳು ಸಿನೆಮಾ ಜೂ.14ರಂದು ಕರಾವಳಿಯಾದ್ಯಂತ ತೆರೆ ಕಾಣಲಿದ್ದು ಪುತ್ತೂರು ಜಿ.ಎಲ್ ಒನ್ ಮಾಲ್ ನಲ್ಲಿರುವ ಭಾರತ್ ಸೀನೆಮಾಸ್ ನಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಾಯಕ ನಟ ಸಿದ್ಧಾರ್ಥ್ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ.

ಈಗಾಗಲೇ ತುಡರ್ ಸಿನಿಮಾ ಪ್ರೀಮಿಯರ್ ಶೋ ಪ್ರದರ್ಶನಗೊಂಡು ಸಾರ್ವತ್ರಿಕ ಶ್ಲಾಘನೆಗೆ ಪಾತ್ರವಾಗಿದೆ‌. ಉತ್ತಮ ಚಿತ್ರಕತೆಯನ್ನೊಳಗೊಂಡ ಸಿನಿಮಾ ಕುಟುಂಬ ವರ್ಗದವರನ್ನು ಆಕರ್ಷಿಸಿದೆ ಎಂದ ಅವರು ಮಂಗಳೂರಿನಲ್ಲಿ ರೂಪವಾಣಿ, ಭಾರತ್‌ ಸಿನೆಮಾಸ್‌, ಪಿವಿಆರ್‌, ಸಿನೆಪೊಲಿಸ್‌, ಸುರತ್ಕಲ್‌ನಲ್ಲಿ ಸಿನೆಗ್ಯಾಲಕ್ಸಿ, ಪಡುಬಿದ್ರಿಯಲ್ಲಿ ಭಾರತ್‌ ಸಿನೆಮಾಸ್‌, ಉಡುಪಿಯಲ್ಲಿ ಕಲ್ಪನ, ಭಾರತ್‌ ಸಿನೆಮಾಸ್‌, ಮಣಿಪಾಲದಲ್ಲಿ ಐನಾಕ್ಸ್‌, ಭಾರತ್‌ ಸಿನೆಮಾಸ್‌, ಕಾರ್ಕಳದಲ್ಲಿ ಪ್ಲಾನೆಟ್‌, ರಾಧಿಕಾ, ಪುತ್ತೂರಿನಲ್ಲಿ ಭಾರತ್‌ ಸಿನೆಮಾಸ್‌, ಬೆಳ್ತಂಗಡಿಯಲ್ಲಿ ಭಾರತ್‌ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ.
ಸಿನೆಮಾಕ್ಕೆ ವಿಲ್ಸನ್‌ ರೆಬೆಲ್ಲೊ, ಹರೀಶ್‌ ಶೆಟ್ಟಿ, ವಿದ್ಯಾ ಸಂಪತ್‌ ಬಂಡವಾಳ ಹೂಡಿದ್ದಾರೆ. ತೇಜೇಶ್‌ ಪೂಜಾರಿ ಎಲ್ಸನ್‌ ಮಸ್ಕರೇನಸ್‌ ನಿರ್ದೇಶಕರಾಗಿದ್ದು ಕಥೆ, ಚಿತ್ರಕಥೆ, ಸಂಭಾಷಣೆ ಸಾಹಿತ್ಯ ಮೋಹನ್‌ ರಾಜ್‌ ಅವರದ್ದು. ಅರವಿಂದ ಬೋಳಾರ್‌ ಸಹಿತ ಪ್ರಖ್ಯಾತ ಕಲಾವಿದರು ಸಿನೆಮಾದಲ್ಲಿದ್ದಾರೆ ಎಂದರು. ನಿರ್ಮಾಪಕ ವಿಲ್ಸನ್‌ ರೆಬೆಲ್ಲೋ , ವಿದ್ಯಾ ಸಂಪತ್‌, ಪ್ರಜ್ವಲ್ ಶೆಟ್ಟಿ, ಸಂಪತ್ ಕರ್ಕೇರ, ಚಿತ್ರದ ವಿತರಕ ಬಾಲಕೃಷ್ಣ ಕುಕ್ಕಾಡಿ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here