ಸವಣೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

0

ಸವಣೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ಪದವಿಯ ವಿದ್ಯಾರ್ಥಿಗಳಿಗೆ ವಿದಾಯಕೂಟ ಸಮಾರಂಭ ಜೂ.10ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ  ಕೆ ಸೀತಾರಾಮ ರೈ ಸವಣೂರು  ಮಾತನಾಡಿ, ವಿದ್ಯಾರ್ಥಿಗಳು ಒಂದು ಸಂಸ್ಥೆಯ ರಾಯಭಾರಿಗಳಿದ್ದಂತೆ ಎನ್ನುವುದರ ಮೂಲಕ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಗಳಾದ ಇಂಜಿನಿಯರ್ ಅಶ್ವಿನ್ ಎಲ್ ಶೆಟ್ಟಿ  ಮಾತನಾಡಿ, ಪದವಿ ಶಿಕ್ಷಣವನ್ನು ಪಡೆದ ನಂತರ ವಿದ್ಯಾರ್ಥಿಗಳು ಸ್ವತಂತ್ರರಾಗಿ ಜವಾಬ್ದಾರಿಯುತ ಜೀವನವನ್ನು ನಡೆಸುವಂತಾಗಬೇಕು ಎಂದರು. ವಿದ್ಯಾರ್ಥಿಗಳಾದ ಅಭಿಜ್ಞ, ಸಾಧಿಕ್ ಹಾಗೂ ಶಮೀರ್ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ ನಾರಾಯಣ ಮೂರ್ತಿ ಕೆ ಹಾಗೂ ಇತಿಹಾಸ ವಿಭಾಗದ ಉಪನ್ಯಾಸಕಿಯಾದ ಪ್ರತಿಭಾ ಎಸ್ ಇವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಹುಟ್ಟು ಹಬ್ಬ ಆಚರಣೆ
ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಶ್ರೀಯುತ ಕೆ ಸೀತಾರಾಮ ರೈ ಸವಣೂರು ಇವರ 77ನೇ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಉಪಪ್ರಾಂಶುಪಾಲರಾದ ಶೇಷಗಿರಿ ಎಂ ಇವರು ಶುಭಹಾರೈಕೆಯ ಮಾತುಗಳನ್ನಾಡಿದರು. ವೇದಿಕೆಯಲ್ಲಿ  ಕಸ್ತೂರಿಕಲಾ ಸೀತಾರಾಮ ರೈ, ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಟ್ರಸ್ಟಿಗಳಾದ ರಶ್ಮಿ ಅಶ್ವಿನ್ ಶೆಟ್ಟಿ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲರಾದ ಸೀತಾರಾಮ ಕೇವಳ ಉಪಸ್ಥಿತರಿದ್ದರು. ಶ್ರಾವ್ಯವಾಣಿ ಮತ್ತು ಆಭಿಜ್ಞ ರವರ ಪ್ರಾರ್ಥಿಸಿದರು. ಫಾತಿಮತ್ ಶಝಾನ ಸ್ವಾಗತಿಸಿ, ಕಲ್ಪನಾ ವಂದನಾರ್ಪಣೆಗೈದರು. ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಪ್ರೀತಿ ಕಾರ್ಯಕ್ರಮದ ನಿರೂಪಣೆಗೈದರು.

LEAVE A REPLY

Please enter your comment!
Please enter your name here