ಜೂ.13: ಬನ್ನೂರು ಚರ್ಚ್‌ನಲ್ಲಿ ಸಂತ ಅಂತೋನಿಯವರ ವಾರ್ಷಿಕ ಮಹೋತ್ಸವ

0

ಪುತ್ತೂರು: ಪವಾಡ ಪುರುಷ ಸಂತರಾದ ಸಂತ ಅಂತೋನಿಯವರು ಜೂ.13ರಂದು ಇಹಲೋಕವನ್ನು ತ್ಯಜಿಸಿ ಸ್ವರ್ಗಕ್ಕೇರಿದ ದಿನವನ್ನು ಬನ್ನೂರು ಸಂತ ಅಂತೋನಿ ಚರ್ಚ್‌ನಲ್ಲಿ ಪ್ರತಿ ವರ್ಷ ವಾರ್ಷಿಕ ಹಬ್ಬವಾಗಿ ಆಚರಿಸಲಾಗುತ್ತಿದೆ.


ಆ ಪ್ರಯುಕ್ತ ಚರ್ಚ್‌ನಲ್ಲಿ ಮೇ.31ರಿಂದ ಜೂ.12ರ ತನಕ 13 ದಿನಗಳ ಭಕ್ತಾಧಿಗಳ ಬೇಡಿಕೆ, ಹರಕೆಗಳ ವಿಶೇಷ ಪ್ರಾರ್ಥನೆ(ನವೇನಾ)ಯು ಜರಗಿದ್ದು, ವಾರ್ಷಿಕ ಮಹೋತ್ಸವದ ದಿವ್ಯ ಬಲಿಪೂಜೆಯನ್ನು ಮಂಗಳೂರು ಕಥೋಲಿಕ್ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಧರ್ಮಗುರು ವಂ|ಮ್ಯಾಕ್ಸಿಂ ನೊರೋನ್ಹಾರವರು ನೆರವೇರಿಸಲಿದ್ದಾರೆ. ಪುತ್ತೂರು ವಲಯದ ಪ್ರಧಾನ ಧರ್ಮಗುರು ಹಾಗೂ ಮಾಯಿದೆ ದೇವುಸ್ ಚರ್ಚ್‌ನ ಪ್ರಧಾನ ಧರ್ಮಗುರು ವಂ|ಲಾರೆನ್ಸ್ ಮಸ್ಕರೇನ್ಹಸ್, ಸಹಾಯಕ ಧರ್ಮಗುರು ವಂ|ಲೋಹಿತ್ ಅಜಯ್ ಮಸ್ಕರೇನ್ಹಸ್, ಮರೀಲ್ ಸೆಕ್ರೇಡ್ ಹಾರ್ಟ್ ಚರ್ಚ್‌ನ ಧರ್ಮಗುರು ವಂ|ಜೆ.ಬಿ ಮೊರಾಸ್, ಉಪ್ಪಿನಂಗಡಿ ದೀನರ ಕನ್ಯಾಮಾತಾ ದೇವಾಲಯದ ಧರ್ಮಗುರು ವಂ|ಜೆರಾಲ್ಡ್ ಡಿ’ಸೋಜ, ಧರ್ಮಗುರುಗಳಾದ ವಂ|ಆಂಟನಿ ಪ್ರಕಾಶ್ ಮೊಂತೇರೋ, ವಂ|ಅಶೋಕ್ ರಾಯನ್ ಕ್ರಾಸ್ತಾ, ವಂ|ಮ್ಯಾಕ್ಸಿಂ ಡಿ’ಸೋಜ. ವಂ|ರೂಪೇಶ್ ತಾವ್ರೋ ಅಲ್ಲದೆ ವಲಯದ ಚರ್ಚ್‌ಗಳ ಧರ್ಮಗುರುಗಳು, ಸಂತ ಫ್ರಾನ್ಸಿಸ್ಕನ್ ಸಭೆಯ ಧರ್ಮಗುರುಗಳು, ಧರ್ಮಭಗಿನಿಯರು, ಭಕ್ತ ಬಾಂಧವರು ದಿವ್ಯ ಬಲಿಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಚರ್ಚ್‌ನ ಧರ್ಮಗುರು ವಂ|ಬಾಲ್ತಜಾರ್ ಪಿಂಟೊ, ಸಹಾಯಕ ಧರ್ಮಗುರು ವಂ|ಬೆನೆಡಿಕ್ಟ್ ಗೋಮ್ಸ್, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ತೋಮಸ್ ಫೆರ್ನಾಂಡೀಸ್, ಕಾರ್ಯದರ್ಶಿ ಜೋಯ್ಸ್ ಡಿ’ಸೋಜ, 21 ಆಯೋಗಗಳ ಸಂಚಾಲಕ ಜೆರಿ ಪಾಯ್ಸ್‌ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿವ್ಯ ಬಲಿಪೂಜೆ ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ.

LEAVE A REPLY

Please enter your comment!
Please enter your name here