ಶ್ರೀ ಮಹಾಲಿಂಗೇಶ್ವರ ದೇವಸ್ಥಾನ-ಕೊಂಬೆಟ್ಟು ಕಾಲೇಜು ಸಂಪರ್ಕ ರಸ್ತೆಯ ಬಲಭಾಗದಲ್ಲಿ ಚರಂಡಿ ನಿರ್ಮಿಸುವಂತೆ ನಗರಸಭೆಗೆ ಮನವಿ

0

ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯ ಶ್ರೀಮಹಾಲಿಂಗೇಶ್ವರ ದೇವಸ್ಥಾನದಿಂದ ಕೊಂಬೆಟ್ಟು ಜೂನಿಯರ್ ಕಾಲೇಜು ಸಂಪರ್ಕ ರಸ್ತೆಯಲ್ಲಿ ಚರಂಡಿ ನಿರ್ಮಿಸಿ ವಿದ್ಯಾರ್ಥಿಗಳಿಗಾಗುವ ತೊಂದರೆ ನಿವಾರಿಸಬೇಕೆಂದು ನೆಲ್ಲಿಕಟ್ಟೆ ವಾರ್ಡ್ ಬೂತ್ ಸಮಿತಿ ಅಧ್ಯಕ್ಷ ಕೆ. ದಾಮೋದರ ಭಂಡಾರ್‌ಕರ್ ಪುತ್ತೂರು ನಗರಸಭೆಯ ಪೌರಾಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಕೊಂಬೆಟ್ಟು ಜೂನಿಯರ್ ಕಾಲೇಜಿಗೆ ಹೋಗುವ ರಸ್ತೆಯಲ್ಲಿ ಕಿರುಸೇತುವೆಯ ಮುಂದಕ್ಕೆ ಬಲಭಾಗದಲ್ಲಿ ಮಳೆ ನೀರಿನ ಹರಿವಿಗೆ ಚರಂಡಿ ಇಲ್ಲದೆ ಮಳೆನೀರು ರಸ್ತೆಯಲ್ಲಿ ಹರಿಯುತ್ತಿದೆ. ಇದರಿಂದ ಈ ರಸ್ತೆಯಲ್ಲಿ ಸಂಚರಿಸುವ ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಆದುದರಿಂದ ಸೂಕ್ತ ಸಾಮರ್ಥ್ಯದ ಪೂರ್ವ ನಿರ್ಮಿತ ಆರ್‌ಸಿಸಿ ಬ್ಲಾಕ್ ಬಳಸಿ ಚರಂಡಿ ವ್ಯವಸ್ಥೆ ಮಾಡಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here