ಶಾಂತಿನಗರ ಶಾಲೆ: ಉಚಿತ ನೋಟ್ ಪುಸ್ತಕ, ಬ್ಯಾಗ್, ಕೊಡೆ, ಲೇಖನಿ ಸಾಮಾಗ್ರಿ ವಿತರಣೆ

0

ನೆಲ್ಯಾಡಿ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಾಂತಿನಗರ, ಗೋಳಿತ್ತಟ್ಟು ಇಲ್ಲಿ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಶಾಲಾ ಎಸ್‌ಡಿಎಂಸಿಯ ಪೂರ್ವಾಧ್ಯಕ್ಷ ಮೋನಪ್ಪ ಪೂಜಾರಿ ಡೆಂಬಳೆ ಹಾಗೂ ಶಾಲಾ ಪೋಷಕರಾದ ಸದಾನಂದ ಪೂಜಾರಿ ಕಿನ್ಯಡ್ಕರವರು ರೂ.8 ಸಾವಿರಕ್ಕಿಂತಲೂ ಅಧಿಕ ಮೊತ್ತದ ನೋಟ್ ಪುಸ್ತಕ, ಬ್ಯಾಗ್, ಕೊಡೆ ಹಾಗೂ ಲೇಖನಿ ಸಾಮಾಗ್ರಿಗಳನ್ನು ವಿತರಿಸಿದರು.


ಈ ಸಂದರ್ಭದಲ್ಲಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಪುರುಷೋತ್ತಮ ಪೂಜಾರಿ, ಸದಸ್ಯರಾದ ಹರೀಶ್ ಪೂಜಾರಿ ಡೆಂಬಳೆ, ಕೃಷ್ಣಪ್ಪ ಪೂಜಾರಿ ಮುಂಡಾವು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಅಡುಗೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here