ಜೂ.16:ದ.ಕ ಗ್ಯಾರೇಜ್ ಮಾಲಕರ ಸಂಘದ ಪುತ್ತೂರು ವಲಯದ ಮಹಾಸಭೆ

0

ಪುತ್ತೂರು: ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸಂಘ(ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ) ಇದರ ಪುತ್ತೂರು ವಲಯದ ಮಹಾಸಭೆಯು ಜೂ. 16 ರಂದು ಬೆಳಿಗ್ಗೆ ಮಿನಿ ವಿಧಾನಸೌಧದ ಬಳಿಯ ರೋಟರಿ ಮನೀಷಾ ಸಭಾಂಗಣದಲ್ಲಿ ನಡೆಯಲಿದೆ.

ಪುತ್ತೂರು ನಗರ ಎಸ್.ಐ ಸತೀಶ್ ಜಿ.ಜೆರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಪುತ್ತೂರು ವಲಯ ಗ್ಯಾರೇಜು ಮಾಲಕರ ಸಂಘದ ಅಧ್ಯಕ್ಷ ಕಿಶೋರ್ ಕುಮಾರ್ ಬಿ.ರವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಂಗಳೂರು ದ.ಕ ಮತ್ತು ಉಡುಪಿ ಜಿಲ್ಲೆಯ ದ.ಕ ಗ್ಯಾರೇಜ್ ಮಾಲಕರ ಸಂಘದ ಚೇರ್ ಮ್ಯಾನ್ ದಿವಾಕರ್ ಎಂ, ಮಾಜಿ ಚೇರ್ ಮ್ಯಾನ್ ಜಿ.ಪುಂಡಲೀಕ ಸುವರ್ಣ, ಕೋಶಾಧಿಕಾರಿ ಕೆ.ಎ ರಾಜ್ ಗೋಪಾಲ, ಕಾರ್ಯದರ್ಶಿ ಪುರುಷೋತ್ತಮ ಕೆ, ಮಾಜಿ ಅಧ್ಯಕ್ಷ ದಿನೇಶ್ ಕುಮಾರ್, ಮಂಗಳೂರು ವಲಯ ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ಕಿಶೋರ್ ಕೇಶವ, ದ.ಕ ಜಿಲ್ಲಾ ಗ್ಯಾರೇಜ್ ಮಾಲಕರ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಎ.ಜನಾರ್ದನರವರು ಭಾಗವಹಿಸಲಿದ್ದಾರೆ ಎಂದು ಪುತ್ತೂರು ವಲಯ ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ಕಿಶೋರ್ ಕುಮಾರ್ ಬಿ, ಗೌರವಾಧ್ಯಕ್ಷ ಸುರೇಶ್ ಸಾಲ್ಯಾನ್, ಕಾರ್ಯದರ್ಶಿ ಸುನಿಲ್ ಡಿ, ಕೋಶಾಧಿಕಾರಿ ಪ್ರಕಾಶ್ ರೈರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here