ಪಡ್ನೂರು ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ

0

ಪುತ್ತೂರು: ಪಡ್ನೂರು ಸ. ಉ. ಪ್ರಾ. ಶಾಲೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ಜೂ.15ರಂದು ನಡೆಯಿತು.
ಶಾಲೆಯ ಹಿರಿಯ ವಿದ್ಯಾರ್ಥಿ ಮಹೇಶ್ ಬೇರಿಕೆ ಇವರು ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕ ವಿತರಿಸಿದರು. ಕಾರ್ಯಕ್ರಮದಲ್ಲಿ ನಿವೃತ ಮುಖ್ಯಗುರು ಸುಬ್ರಾಯ ಭಟ್ ಅತಿಥಿಯಾಗಿ ಭಾಗವಹಿಸಿದ್ದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಸೀತಾರಾಮ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯರಾದ ಬಾಲಕೃಷ್ಣ ಜೋಯಿಸ, ಈಶ್ವರ ಮೂಲ್ಯ ಹಾಗೂ ಬನ್ನೂರು ಗ್ರಾ. ಪಂ. ಸದಸ್ಯರಾಗಿರುವ ಶ್ರೀನಿವಾಸ ಪೆರ‍್ವೋಡಿ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು ಪ್ರಭಾರ ಮುಖ್ಯಶಿಕ್ಷಕಿ ಜೀವನ್ ರಶ್ಮಿ ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು. ಅತಿಥಿ ಶಿಕ್ಷಕಿ ಅಕ್ಷತಾ ಕುಮಾರಿ ವಂದಿಸಿದರು. ಶಿಕ್ಷಕ ಮಹದೇವ್, ಕಾರ್ಯಕ್ರಮ ನಿರೂಪಿಸಿದರು. ಚಂದ್ರಕಲಾ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here