ಉಪ್ಪಿನಂಗಡಿ: ಮಹಿಳೆ ಸಾವು- ಕೊಲೆ ಶಂಕೆ

0

ಉಪ್ಪಿನಂಗಡಿ: ಇಲ್ಲಿನ ಪೆರ್ನೆ ಬಳಿಯ ಬಿಳಿಯೂರು ದರ್ಖಾಸ್ ಎಂಬಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಇಲ್ಲಿನ ನಿವಾಸಿ ಹೇಮಾವತಿ (37 ) ಮೃತ ಮಹಿಳೆ.


ಈಕೆ ತಾಯಿ, ಅಕ್ಕನ ಮಗನೊಂದಿಗೆ ಈ ಮನೆಯಲ್ಲಿದ್ದ ವೇಳೆ ನಿನ್ನೆ ರಾತ್ರಿ ಕೃತ್ಯ ನಡೆದಿದೆ. ಮೊದಲಿಗೆ ಪರಿಸರದಲ್ಲಿ ಹೃದಯಾಘಾತವೆಂಬ ಸುದ್ದಿ ಹರಡಿತ್ತು. ಆದರೆ ಬಳಿಕ ಈ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಪೊಲೀಸರು ವಿಚಾರಣೆಗಾಗಿ ಮೃತಳ ಅಕ್ಕನ ಮಗ ಎಸೆಸ್ಸೆಲ್ಸಿ ಓದುತ್ತಿರುವ ಅಪ್ರಾಪ್ತ ಬಾಲಕನನ್ನು, ಆತನ ತಂದೆ ಶಂಕರ ಎಂಬವರನ್ನು ಕರೆದೊಯ್ದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದಷ್ಟೇ ಬೆಳಕಿಗೆ ಬರಬೇಕಷ್ಟೇ. ಮೃತರು ಹೊಟೇಲ್ ಕಾರ್ಮಿಕೆಯಾಗಿದ್ದರು.

LEAVE A REPLY

Please enter your comment!
Please enter your name here