ಪಿಯು ಉಪನ್ಯಾಸಕರ ನಿಯೋಜನೆಯನ್ನು ರದ್ದು ಮಾಡಿ- ಖಾಯಂ ಉಪನ್ಯಾಸಕರಿಂದ ಶಾಸಕರಿಗೆ ಮನವಿ

0

ಪುತ್ತೂರು: ಉಪನ್ಯಾಸಕರ ಕೊರತೆಯಿರುವ ಕಾಲೇಜುಗಳಿಗೆ ಖಾಯಂ ಶಿಕ್ಷಕರನ್ನು ವಿವಿಧ ಕಾಲೇಜುಗಳಿಗೆ ನಿಯೋಜನೆ ಮಾಡುವ ನಿಯಮವನ್ನು ಸರಕಾರ ರದ್ದು ಮಾಡಬೇಕೆಂದು ಆಗ್ರಹಿಸಿ ಪಿಯು ಖಾಯಂ ಶಿಕ್ಷಕರ ಸಂಘದ ವತಿಯಿಂದ ಶಾಸಕರಿಗೆ ಮನವಿ ಸಲ್ಲಿಸಿದ್ದಾರೆ.

ಈ ಬಗ್ಗೆ ಮನವಿ ಮಾಡಿಕೊಂಡಿರುವ ಸಂಘ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಚಾಲ್ತಿಯಲ್ಲಿರುವ ಉಪನ್ಯಾಸಕರ ನಿಯೋಜನೆ ಪದ್ದತಿಯಿಂದ ವಿದ್ಯಾರ್ಥಿಗಳಿಗೆ ಅನಾನುಕೂಲವಾಗುವುದರಿಂದ ಬಗ್ಗೆ ಪ್ರಸ್ತುತ ಜಾರಿಯಲ್ಲಿರುವ ಸರಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನಿಯೋಜನ ಪದ್ಧತಿಯಿಂದ ಈ ಕೆಳಗಿನ ಗಂಭೀರ ಸಮಸ್ಯೆಗಳು ಉದ್ಭವಿಸುತ್ತದೆ.ನಿಯೋಜನೆ ಮೇಲೆ ಉಪನ್ಯಾಸಕರನ್ನು ಪಡೆಯುವ ಕಾಲೇಜುಗಳು ಮತ್ತು ನಿಯೋಜನೆ ಮೇಲೆ ಉಪನ್ಯಾಸಕರನ್ನು ಕಳುಹಿಸುವ ಕಾಲೇಜುಗಳಲ್ಲಿ ಕ್ರಮಬದ್ಧವಾಗಿ ಪಾಠ ಪ್ರವಚನಗಳನ್ನು ನಡೆಸಲು ಸಾಧ್ಯವಾಗದೆ ಇರುವುದರಿಂದ ಶೈಕ್ಷಣಿಕ ಪರಿಸರ ಹದಗೆಡುತ್ತಿದೆ.ಈ ಪದ್ಧತಿಯಿಂದಾಗಿ, ವಾಠ ಪ್ರವಚನಗಳ ದೈನಂದಿನ ವೇಳಾಪಟ್ಟಿಯನ್ನು ವೈಜ್ಞಾನಿಕವಾಗಿ ರೂಪಿಸಲು ಸಾಧ್ಯವಾಗದಿರುವುದರಿಂದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಒತ್ತಡದ ಸನ್ನಿವೇಶವನ್ನು ಎದುರಿಸುತ್ತಿದ್ದಾರೆ.ವಾರದಲ್ಲಿ ಮೂರು ದಿವಸಗಳಿಗೆ ಸೀಮಿತವಾಗಿ ನಿಯೋಜನೆಯನ್ನು ಅನುಷ್ಠಾನ ಗೊಳಿಸಬೇಕಾಗಿರುವುದರಿಂದ ಪಾಠ ಪ್ರವಚನೆಗಳ ನಿರಂತರತೆಯ ಕೊರತೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಬಗ್ಗೆ ಗಮನಹರಿಸಲು ಸಾಧ್ಯವಾಗುತ್ತಿಲ್ಲ.ಸ್ಥಳೀಯ ಪ್ರಾಧಿಕಾರದ ಹಂತದಲ್ಲಿ, ನಿಯೋಜನೆ ಪದ್ಧತಿಯನ್ನು ಈಗಾಗಲೇ ಪ್ರಾಥಮಿಕ ಪ್ರೌಢ ಹಾಗೂ ಪದವಿ ಕಾಲೇಜುಗಳಿಗೆ ಸಂಬಂಧಿಸಿದಂತೆ ರದ್ದುಪಡಿಸಲಾಗಿದೆ. ಮುಂದುವರಿದು ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ ನಿಯೋಜನೆ ಪದ್ಧತಿಯನ್ನು ಪ್ರಸ್ತುತ ಕೈ ಬಿಡಲಾಗಿದೆ.ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಬಿ.ಎಡ್ ಕಡ್ಡಾಯ ಮಾಡಿರುವುದರಿಂದ ಅತಿಥಿ ಉಪನ್ಯಾಸಕರ ಲಭ್ಯತೆ ಕಷ್ಟಸಾಧ್ಯವಾಗಿರುತ್ತದೆ. ಆದ್ದರಿಂದ ತಕ್ಷಣಕ್ಕೆ ಬಿ.ಎಡ್ ಇಲ್ಲದಿದ್ದರೂ ಅವಕಾಶ ನೀಡುವುದು.ಈ ಮೇಲಿನ ಅಂಶಗಳ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ನಿಯೋಜನೆ ಪದ್ಧತಿಯನ್ನು ರದ್ದುಪಡಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಂಬಂಧಿತರಿಗೆ ನಿರ್ದೇಶಿಸುವಂತೆ ಶಾಸಕರಿಗೆ ನೀಡಿದ ಮನವಿಯಲ್ಲಿ ಆಗ್ರಹಿಸಿದ್ದಾರೆ .

ಈ ಸಂದರ್ಭದಲ್ಲಿ ಜಿಲ್ಲಾ ಸಂಘದ ಅಧ್ಯಕ್ಷ ಹರಿಪ್ರಕಾಶ್ ಬೈಲಾಡಿ , ಮಹಿಳಾ ಪ ಪೂ ಕಾಲೇಜಿನ ಉಪನ್ಯಾಸಕಿ ಬೋಜರಾಜ್ , ಕಬಕ ಪ ಪೂ ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ರೈ, ಕೆಯ್ಯೂರು ಪ ಪೂ ಕಾಲೇಜಿನ ಉಪನ್ಯಾಸಕ ಬಾಲಕೃಷ್ಣ ಬಿ, ಬೆಟ್ಟಂಪಾಡಿ ಕಾಲೇಜಿನ ಉಪನ್ಯಾಸಕ ಫಾರೂಕ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here