ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಹಿಂದೂ ಸಾಮ್ರಾಜ್ಯ ದಿವಸ್ ಆಚರಣೆ

0

ಪುತ್ತೂರು: ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ಹಿಂದೂ ಸಾಮ್ರಾಜ್ಯ ದಿವಸ್ ಆಚರಣೆಯ ಕಾರ‍್ಯಕ್ರಮವನ್ನು ಆಚರಿಸಲಾಯಿತು. ವಿದ್ಯಾಭಾರತಿ ಜಿಲ್ಲಾ ಯೋಗ ಶಿಕ್ಷಣ ಸಂಯೋಜಕರಾದ ಚಂದ್ರಶೇಖರ ದೇಲಂಪಾಡಿ ಮಾತನಾಡಿ ಪ್ರಜಾರಕ್ಷಕ ಹಿಂದೂ ಸಾಮ್ರಾಟ ರಾಷ್ಟ್ರಪ್ರೇಮಿ ಶಿವಾಜಿ ಮಹಾರಾಜರು ತಾಯಿ ಹೇಳುವ ಪೌರಾಣಿಕ ವೀರಾವೇಶದ ಕಥೆಯನ್ನು ಕೇಳುತ್ತಾ ಬೆಳೆದ ಧೀರ. ಅಪ್ರತಿಮ ನೀತಿತೇಜಸ್ಸಿನಿಂದ ಬೆಳಗುತ್ತಿದ್ದ ವ್ಯಕ್ತಿತ್ವ ಅವರದು. ಯಾವ ಕಾಲದಲ್ಲಿ ನಮ್ಮ ಧರ್ಮ ಸಂಸ್ಕೃತಿಗಳು ಹೇಳ ಹೆಸರಿಲ್ಲದಂತೆ ತೊಡೆದು ಹೋಗುತ್ತಿದ್ದವೋ, ನಮ್ಮಜನಾಂಗಕ್ಕೆ ಜನಾಂಗವೇ ವಿನಾಶದ ಮಡುವಿನಲ್ಲಿ ಮುಳುಗಿ ಹೋಗುತ್ತಿದಿತೋ ಅಂತಹ ವಿಷಗಳಿಗೆಯಲ್ಲಿ ನಮ್ಮ ಧರ್ಮವನ್ನೂ ಸಮಾಜವನ್ನೂ ಉದ್ಧಾರ ಮಾಡಿದ ಮಹಾನ್ ರಾಷ್ಟ್ರ ಪುರುಷ ಶಿವಾಜಿ ಮಹಾರಾಜರು. ಅಧರ್ಮವನ್ನು ಅಳಿಸಿ ಧರ್ಮರಾಜ್ಯ ಸ್ಥಾಪಿಸಿದ ಭಾರತದ ಆತ್ಮಚೇತನದ ಮೂರ್ತರೂಪವೇ ಅವರು. ಶಿವಾಜಿ ಸ್ವಶಕ್ತಿಯಿಂದ ಹಿಂದೂ ಸಾಮ್ರಾಜ್ಯಕ್ಕೆ, ಅಭೀಷಕ್ತನಾದ ದಿನ, ಶ್ರೇಷ್ಟ ಶುದ್ಧ ತ್ರಯೋದಶಿಯನ್ನು ರಾಷ್ಟ್ರಕ್ಕೆ ಪರ್ವದಿನವಾಗಿ, ಹಿಂದೂ ಸಾಮ್ರಾಜ್ಯ ದಿನೋತ್ಸವವಾಗಿ, ರಾಷ್ಟ್ರಜಾಗರಣ ಮಹೋತ್ಸವವಾಗಿ ಆಚರಿಸಲಾಗುತ್ತದೆ ಎಂದು ಅವರು ಹೇಳಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನ ಭಾಗ್ ಸ್ವಾಗತಿಸಿ, ಕಾರ‍್ಯಕ್ರಮದ ಕುರಿತಾಗಿ ಮಾತನಾಡುತ್ತಾ ಶಿವಾಜಿಯ ಆದರ್ಶಗಳನ್ನು ಮೈಗೂಡಿಸಿಕೊಂಡು ದೇಶಕಟ್ಟುವ ಕಾರ‍್ಯದಲ್ಲಿ ತೊಡಗಿಸಿಕೊಳ್ಳಲು ಸಮರ್ಥರಾಗಬೇಕು ಎಂದು ಹೇಳಿದರು. ಕಾರ‍್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಮತ್ತು ಎಲ್ಲಾ ವಿದ್ಯಾರ್ಥಿಗಳೂ ಭಾಗವಹಿಸಿದ್ದರು .

LEAVE A REPLY

Please enter your comment!
Please enter your name here