ಜೂ.22 ಮಂಗಳೂರಿನಲ್ಲಿ ಉಪನ್ಯಾಸಕರ ಜಿಲ್ಲಾ ಸಂಘದ ಸಮಾಲೋಚನಾ ಸಭೆ

0

ಪುತ್ತೂರು:ಜಿಲ್ಲೆಯ ಸರಕಾರಿ,ಅನುದಾನಿತ ಮತ್ತು ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವೃತ್ತಿ ಸಂಬಂಧಿತ ಶ್ರೇಯೋಭಿವೃದ್ಧಿಗಾಗಿ ಪ್ರಾರಂಭಿಸಲಾಗಿರುವ ದ.ಕ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ (DKPUCLA)ದ ಸಮಾಲೋಚನಾ ಸಭೆಯು ಜೂ.22ರಂದು ಅಪರಾಹ್ನ 2.30ಕ್ಕೆ ಮಂಗಳೂರಿನ ಬಲ್ಮಠ ಸರಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.


ಸಭೆಯು ದಕ್ಷಿಣ ಕನ್ನಡ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಅಧ್ಯಕ್ಷ ಜಯಾನಂದ ಸುವರ್ಣ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಉಪನ್ಯಾಸಕರ ಸಮಾನ ಪ್ರಾತಿನಿಧ್ಯ ಮತ್ತು ಸಂಘದ ಬೈಲ ರಚಿಸಿ ನೋಂದಣಿ ಮಾಡಿಕೊಳ್ಳುವ ಬಗ್ಗೆ ತೀರ್ಮಾನಿಸಲಾಗುವುದು. ವಿಷಯವಾರು ಉಪನ್ಯಾಸಕರ ಸಂಘದ ಪದಾಧಿಕಾರಿಗಳು ಹಾಗೂ ಜಿಲ್ಲೆಯ ಹೆಚ್ಚಿನ ಉಪನ್ಯಾಸಕರು ಭಾಗವಹಿಸುವಂತೆ ಸಂಘದ ಅಧ್ಯಕ್ಷ ಹರಿಪ್ರಕಾಶ್ ಬೈಲಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here