ಕಡಬ ಸರಸ್ವತಿ ಪ್ರೌಢಶಾಲೆಯಲ್ಲಿ ಹಿಂದೂ ಸಾಮ್ರಾಜ್ಯ ದಿನಾಚರಣೆ

0

ಕಡಬ: ಸರಸ್ವತಿ ವಿದ್ಯಾಲಯ ಪ್ರೌಢಶಾಲೆಯಲ್ಲಿ ಜೂ. 19ರಂದು ಹಿಂದು ಸಾಮ್ರಾಜ್ಯ ದಿನವನ್ನು ಆಚರಿಸಲಾಯಿತು.
ಶಿವಾಜಿ ಮಹಾರಾಜರು ಪಟ್ಟಾಭಿಷೇಕವಾದ ದಿನವನ್ನು ಹಿಂದೂ ಸಾಮ್ರಾಜ್ಯ ದಿನವನ್ನಾಗಿ ಆಚರಿಸಲಾಗುತ್ತಿದೆ. ಈ ದಿನದ ಮಹತ್ವವನ್ನು 10ನೇ ತರಗತಿ ವಿದ್ಯಾರ್ಥಿ ಮೋಕ್ಷಿತ್ ಬಿ ತಿಳಿಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಕೋಶಾಧಿಕಾರಿ ಲಿಂಗಪ್ಪ ಜೆ ವಹಿಸಿದ್ದರು. ವೇದಿಕೆಯಲ್ಲಿ ಪ್ರೌಢ ವಿಭಾಗದ ಮುಖ್ಯಸ್ಥೆ ಶೈಲಶ್ರೀ ರೈ ಎಸ್, ಆಂಗ್ಲ ಮಾಧ್ಯಮ ವಿಭಾಗದ ಪ್ರಭಾರ ಮುಖ್ಯಸ್ಥೆ ಶ್ವೇತ ಕೋಡಿಂಬಾಳ ,ಶಿಕ್ಷಕ ಶಿಕ್ಷಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here