ಜೂನ್ 20ರಿಂದ ಜುಲೈ 20ರವರೆಗೆ ಚರ್ಮ ಗಂಟು ವಿರುದ್ಧ ಉಚಿತ ಲಸಿಕಾ ಅಭಿಯಾನ

0

ಪುತ್ತೂರು : ಜಾನುವಾರುಗಳಲ್ಲಿ ಕಂಡು ಬರುವ ಚರ್ಮಗಂಟು ರೋಗವನ್ನು ತಡೆಗಟ್ಟಲು ಜಿಲ್ಲೆಯಾದ್ಯಂತ ಜೂನ್ 20ರಿಂದ ಜುಲೈ 20ರವರೆಗೆ ಚರ್ಮ ಗಂಟು ವಿರುದ್ಧ ಉಚಿತ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ವೈರಸ್‌ನಿಂದ ಬರುವ ಸಾಂಕ್ರಮಿಕ ರೋಗವಾಗಿದ್ದು, ರೋಗ ತಗುಲಿದ ಜಾನುವಾರುಗಳಲ್ಲಿ ಆರಂಭದಲ್ಲಿ ಜ್ವರ ಕಾಣಿಸಿಕೊಳ್ಳಲ್ಲಿದ್ದು, ಬಳಿಕ ಚರ್ಮದ ಮೇಲೆ ಗಂಟುಗಳು ಕಾಣಿಸಿಕೊಳ್ಳುತ್ತದೆ. ಈ ರೋಗವು ನೊಣ, ಸೊಳ್ಳೆ ಹಾಗೂ ಉಣ್ಣಿಗಳಿಂದ ಹರಡುವ ಸಾಧ್ಯತೆಯಿದ್ದು, 2 ರಿಂದ 5 ಶೇಕಡಾ ಜಾನುವಾರುಗಳು ಈ ರೋಗದಿಂದ ಸಾವನ್ನಪ್ಪುವ ಸಾಧ್ಯತೆ
ಇರುತ್ತದೆ.

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ಮುನ್ನೆಚ್ಚರಿಕಾ ಕ್ರಮವಾಗಿ ಪ್ರತೀ ಜಾನುವಾರುಗಳಿಗೆ ಸಮರೋಪಾದಿಯಲ್ಲಿ 4 ತಿಂಗಳ ಮೇಲ್ಪಟ್ಟ ಎಲ್ಲಾ ಜಾನುವಾರುಗಳಿಗೆ ಈ ಹಿಂದೆ ಲಸಿಕೆಯನ್ನು ಹಾಕಿಸಿದರೂ ಸಹಾ ಹೈನುಗಾರರು ಈ ಬಾರಿಯೂ ಕೂಡಾ ತಮ್ಮ ಜಾನುವಾರುಗಳಿಗೆ ಲಸಿಕೆಯನ್ನು ಹಾಕಿಸಿ ದ.ಕ ಜಿಲ್ಲೆಯಲ್ಲಿರುವ ಜಾನುವಾರು ಗಳನ್ನು ಚರ್ಮಗಂಟು ರೋಗದಿಂದ ರಕ್ಷಿಸಬೇಕಾಗಿ ಪಶುಪಾಲನಾ ಇಲಾಖೆಯು ಎಲ್ಲಾ ರೈತರಲ್ಲಿ ಮನವಿಯನ್ನು ಮಾಡಿದೆ.

ಈ ಕುರಿತು ಹೈನುಗಾರರು ಲಸಿಕೆಗಾಗಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗಳನ್ನು ಅಥವಾ ಹಾಲು ಉತ್ಪಾದಕರ ಸಹಕಾರಿ ಸಂಘದ ಸಂಸ್ಥೆಗಳನ್ನು ಸಂಪರ್ಕಿಸುವಂತೆ ಜಿಲ್ಲಾ ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here