ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ವತಿಯಿಂದ ಯೋಗ ದಿನಾಚರಣೆ

0

ಕಾಣಿಯೂರು: ಇಲ್ಲಿನ ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲ ಕಾಣಿಯೂರು ಇದರ ವತಿಯಿಂದ ವಿಶ್ವಯೋಗ ದಿನಾಚರಣೆ ಕಾರ್ಯಕ್ರಮವನ್ನು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದ ಸಭಾಂಗಣದಲ್ಲಿ ಆಚರಿಸಲಾಯಿತು. ಕಾಣಿಯೂರು ಓಂ ಶಿವಂ ಯೋಗಕೇಂದ್ರದ ಬಿಕೆಎಸ್ ಅಯ್ಯಂಗಾರ್ ಮಾದರಿಯ ಚಿಕಿತ್ಸಾ ಯೋಗಶಿಕ್ಷಕ ಮುಕುಂದ ಕೇಶವ ಕಲ್ಪಡ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.


ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಅಧ್ಯಕ್ಷ ಪುಟ್ಟಣ್ಣ ಗೌಡ ಮುಗರಂಜ, ಯುವಕ ಮಂಡಲದ ಗೌರವಾಧ್ಯಕ್ಷ ಸುರೇಶ್ ಓಡಬಾಯಿ, ಅಧ್ಯಕ್ಷ ರಾಜೇಶ್ ಮೀಜೆ, ಕಾರ್ಯದರ್ಶಿ ದೀಕ್ಷೀತ್ ಕಂಪ, ಉಪಾಧ್ಯಕ್ಷ ಧರ್ಮಪಾಲ ಕಲ್ಪಡ, ಮಾಜಿ ಆಧ್ಯಕ್ಷ ಪರಮೇಶ್ವರ ಅನಿಲ, ರಚನ್ ಬರಮೇಲು, ವಿನಯ್ ಎಲುವೆ, ಕೀರ್ತಿಕುಮಾರ್ ಎಲುವೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here