





ಪುತ್ತೂರು: ಪುತ್ತೂರಿನ ಹೊಟೇಲ್ವೊಂದರ ಸಪ್ಲಾಯರ್ ನಾಪತ್ತೆಯಾದ ಕುರಿತು ಆತನ ಪತ್ನಿ ಪುತ್ತೂರು ನಗರ ಪೊಲಿಸ್ ಠಾಣೆಗೆ ದೂರು ನೀಡಿದ್ದಾರೆ.
ನೆಲ್ಲಿಕಟ್ಟೆಯಲ್ಲಿ ಬಾಡಿಗೆ ಮನೆ ಮಾಡಿಕೊಂಡಿರುವ ಬೊಳುವಾರಿನ ನ್ಯೂ ಹೊಟೇಲ್ ಹರಿಪ್ರಸಾದ್ನಲ್ಲಿ ಸಪ್ಲಾಯರ್ ಆಗಿದ್ದ ಶಿವಪ್ಪ ಯಾನೆ ಶಿವಣ್ಣ(45ವ) ಎಂಬವರು ನಾಪತ್ತೆಯಾದವರು.


ಅವರ ಪತ್ನಿ ಗೀತಾ ಎಂಬವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನನ್ನ ಗಂಡ ಶಿವಪ್ಪ ಯಾನೆ ಶಿವಣ್ಣ ಅವರು ಬೊಳುವಾರು ನ್ಯೂ ಹರಿಪ್ರಸಾದ್ ಹೊಟೇಲ್ನಲ್ಲಿ ಸಫ್ಲೇಯರ್ ಆಗಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಮೂರು ತಿಂಗಳಿನಿಂದ ಕೆಲಸಕ್ಕೆ ಹೋಗದೆ ಮನೆಯಲ್ಲೇ ಇರುತ್ತಿದ್ದರು. ಜೂ.10ರಂದು ಬೆಳಿಗ್ಗೆ ಅವರು ಪೇಟೆಗೆ ಹೋಗಿ ಬರುವುದಾಗಿ ತಿಳಿಸಿ ಮನೆಯಿಂದ ಹೋದವರು ಹಿಂದಿರುಗಿಲ್ಲ. ಆದರೆ ಈ ಹಿಂದೆಯೂ ಅದೇ ರೀತಿ ಮನೆಯಿಂದ ಹೋದವರು ವಾರ ಕಳೆದು ಬಂದಿದ್ದರು. ಹಾಗಾಗಿ ಅದೇ ರೀತಿ ಅವರು ಹಿಂದಿರುಗಿ ಬರಬಹುದು ಎಂದು ತಿಳಿದುಕೊಂಡಿದ್ದೆ. ಆದರೆ ಈ ಬಾರಿ ಅವರು ಮನೆಯಿಂದ ಹೋಗಿ 10 ದಿನ ಆದರೂ ಬಂದಿಲ್ಲ. ಹಾಗಾಗಿ ಪುತ್ತೂರು ಆಸುಪಾಸಿನಲ್ಲಿ ಅವರ ಸ್ನೇಹಿತರಲ್ಲಿ ವಿಚಾರಿಸಿದಾಗ ಯಾವುದೇ ಮಾಹಿತಿ ಇಲ್ಲದಾಗ ತಡವಾಗಿ ಪೊಲೀಸರಿಗೆ ದೂರು ನೀಡಿದ್ದೇನೆ. ಜೂ. 20ರಂದು ಶಿವಪ್ಪ ಯಾನೆ ಶಿವಣ್ಣ ಅವರ ಪತ್ನಿ ಗೀತಾ ಅವರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.














