ಉಪ್ಪಿನಂಗಡಿ ಶ್ರೀರಾಮ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

0

ಪುತ್ತೂರು: ಉಪ್ಪಿನಂಗಡಿ ಶ್ರೀರಾಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಯೋಗ ಪ್ರಾತ್ಯಕ್ಷಿಕೆ ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಯೋಗ ಪ್ರಮುಖ್ ಸಂಜಯ ಸಿ.ವಿ. ಅವರು ಯೋಗದ ಮಹತ್ವ ತಿಳಿಸಿದರು. ಶಾಲಾ ಸಂಚಾಲಕ ಯು.ಜಿ‌. ರಾಧ ಅಧ್ಯಕ್ಷತೆ ವಹಿಸಿದ್ದರು.

ಆಡಳಿತ ಮಂಡಳಿಯ ಉಪಾಧ್ಯಕ್ಷೆ ಅನುರಾಧ ಆರ್. ಶೆಟ್ಟಿ, ಸದಸ್ಯರಾದ ಜಯಂತ್ ಪೊರೋಳಿ‌ ಮತ್ತು ಮಾತೃಭಾರತಿಯ ಅಧ್ಯಕ್ಷೆ ಸೌಮ್ಯ ವಾಸುದೇವ ಆಚಾರ್ಯ ಉಪಸ್ಥಿತರಿದ್ದರು. ಪ್ರೌಢವಿಭಾಗದ ಮುಖ್ಯಸ್ಥ ರಘುರಾಮ ಭಟ್ ಸ್ವಾಗತಿಸಿ, ಆರತಿ ಕಾರ್ಯಕ್ರಮ ನಿರೂಪಿಸಿದರು. ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ವಿಮಲ ವಂದಿಸಿದರು. ಉಷಾ ಕಾರ್ಯಕ್ರಮ ಸಂಯೋಜಿಸಿದರು.

LEAVE A REPLY

Please enter your comment!
Please enter your name here