ಕಾಣಿಯೂರು ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಪ್ರಯುಕ್ತ ವನಮಹೋತ್ಸವ- ಸಸಿ ವಿತರಣೆಗೆ ಚಾಲನೆ

0

ಕಾಣಿಯೂರು: ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿಯ ಕಾಣಿಯೂರು ಮತ್ತು ಸುವರ್ಣ ಮಹೋತ್ಸವದ ಪ್ರಯುಕ್ತ ಸುವರ್ಣ ಮಹೋತ್ಸವ ಸಮಿತಿ ಹಾಗೂ ಶ್ರೀ ಲಕ್ಷ್ಮೀ ನರಸಿಂಹ ಯುವಕ ಮಂಡಲದ ಸಹಕಾರದೊಂದಿಗೆ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮಕ್ಕೆ ಕಾಣಿಯೂರು ಜಾತ್ರಾ ಗದ್ದೆಯಲ್ಲಿ ನಡೆಯಿತು.

ಭಜನಾ ಮಂಡಳಿಯ ಹಿರಿಯ ಸದಸ್ಯರಾದ ಜಿನ್ನಪ್ಪ ಗೌಡರವರು ಗಿಡವನ್ನು ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಅಧ್ಯಕ್ಷರಾದ ಪುಟ್ಟಣ್ಣ ಗೌಡ ಮುಗರಂಜ, ಸುವರ್ಣ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಪದ್ಮಯ್ಯ ಗೌಡ ಅನಿಲ, ಉಪಾಧ್ಯಕ್ಷ ಬಾಲಚಂದ್ರ ಅಬೀರ, ಕಾರ್ಯದರ್ಶಿ ಜಯಂತ ಅಬೀರ, ಕೋಶಾಧಿಕಾರಿ ಕೀರ್ತಿ ಕುಮಾರ್ ಎಳುವೆ, ಜತೆ ಕಾರ್ಯದರ್ಶಿ ವಿನಯ್ ಎಳುವೆ, ಭಜನಾ ಸಂಘಟಕರಾದ ಪರಮೇಶ್ವರ ಅನಿಲ, ಹರೀಶ್ ಮುಗರಂಜ, ಯುವಕ ಮಂಡಲದ ಗೌರವಾಧ್ಯಕ್ಷ ಸುರೇಶ್ ಓಡಬಾಯಿ, ಅಧ್ಯಕ್ಷ ರಾಜೇಶ್ ಮೀಜೆ, ಯುವಕ ಮಂಡಲದ ಉಪಾಧ್ಯಕ್ಷ ಧರ್ಮಪಾಲ ಕಲ್ಪಡ, ಕಾಣಿಯೂರು ಜಾತ್ರೋತ್ಸವ ಸಮಿತಿ ಅಧ್ಯಕ್ಷ ವಿಶ್ವನಾಥ ಓಡಬಾಯಿ, ಕಾರ್ಯದರ್ಶಿ ರವೀಂದ್ರ ಅನಿಲ, ಅಯ್ಯಪ್ಪ ಸೇವಾ ಸಮಿತಿ ಅಧ್ಯಕ್ಷ ಕೃಷ್ಣ ಚೆಟ್ಟಿಯಾರ್, ಲಕ್ಷ್ಮೀ ಪ್ರಿಯ ಮಹಿಳಾ ಭಜನಾ ಮಂಡಳಿಯ ಅಧ್ಯಕ್ಷ ಪ್ರಮೀಳಾ ಅಜಿರಂಗಳ, ನಳಿನಿ ಕಟ್ಟತ್ತಾರು ಭಜನಾ ಮಂಡಳಿಯ ಸದಸ್ಯರಾದ ಬಾಲಕೃಷ್ಣ ಬಸ್ತಿ, ರಮೇಶ್ ಮಾದೋಡಿ ಮತ್ತಿತರರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here